Wednesday, February 12, 2025

ಮನೆಗೆ ಬೆಂಕಿ ಲಕ್ಷಾಂತರ ರೂ ನಷ್ಟ

ಬಂಟ್ವಾಳ : ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಬಾಗಶಃ ಸುಟ್ಟು ಭಸ್ಮವಾದ  ಘಟನೆ ಕಲ್ಲಡ್ಕ ದಲ್ಲಿ ನಡೆದಿದೆ.

ಇಲ್ಲಿನ ‌ಕಲ್ಲಡ್ಕ ಬಾಳ್ತಲಿ ಗ್ರಾಮದ ದಂಡೆಮಾರ್ ಚಂದ್ರಶೇಖರ್ ನಾಯ್ಕ್ ಅವರ ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಮನೆ ಮಂದಿ ಎಲ್ಲರೂ ಸಂಬಂದಿಕರ ಮದುವೆಗೆ ಎಂದು ಬಂಟರ ಭವನ ಕ್ಕೆ ಹೋಗಿದ್ದರು.
ಮದುವೆಯಿಂದ ವಾಪಾಸು ಬರುವ ವೇಳೆ ಮನೆಗೆ ಬೆಂಕಿ ಹಚ್ಚಿಕೊಂಡು ಉರಿಯುತ್ತಿತ್ತು. ಮನೆಯಲ್ಲಿ ಲಕ್ಷಾಂತರ ರೂ ಮೌಲ್ಯದ ಅಡಿಕೆ ಇತ್ತು. ಎಲ್ಲವೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಬಂಟ್ವಾಳ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಪ್ರಮುಖರಾದ  ಚೆನ್ನಪ್ಪ ಕೋಟ್ಯಾನ್ , ಶ್ರೀ ಕಾಂತ್ ಶೆಟ್ಟಿ, ದೇವದಾಸ್ ಶೆಟ್ಟಿ, ದಿನೇಶ್ ಅಮ್ಟೂರು, ದೇವಿಪ್ರಸಾದ್ ಶೆಟ್ಟಿ , ಲಕ್ಷೀ ಗೋಪಾಲ ಆಚಾರ್ಯ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...