Sunday, February 16, 2025

ಕೋರ್ಯಾರು ದೇವಸ್ಥಾನ: ಭಜನ ಮಂಗಲೋತ್ಸವ,ಶನಿಪೂಜೆ

ಬಂಟ್ವಾಳ: ಸಿದ್ದಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾಮಹಮ್ಮಾಯೀ ದೇವಸ್ಥಾನದಲ್ಲಿ ಸೂರ್ಯೋದಯದಿಂದ ಸೂಯಾಸ್ತದವರೆಗೆ ೫೨ನೇ ವರ್ಷದ ಭಜನ ಮಂಗಲೋತ್ಸವ ಹಾಗೂ ಸಾರ್ವಜನಿಕ ಶ್ರೀ ಶನಿಪೂಜೆ ರವಿವಾರ ಜರಗಿತು.


ಬೆಳಗ್ಗೆ ಸೂರ್ಯೋದಯದ ಸಮಯದಲ್ಲಿ ಭಜನೆ ಮಂಗಳೋತ್ಸವ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಪ್ರಫುಲ್ಲ ರೈ ಮಂಜನದೊಟ್ಟು ಅವರು ಉದ್ಘಾಟಿಸಿರು. ಶ್ರೀ ಕ್ಷೇತ್ರ ಪೂಂಜದ ಪ್ರ. ಅರ್ಚಕ ಪ್ರಕಾಶ್ ಭಟ್ ಅವರು ಪ್ರಾರ್ಥನೆ ನೆರವೇರಿಸಿ ಶನಿ ಪೂಜೆ ನಡೆಸಿದರು. ಬಳಿಕ ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನೆ ಮಂಗಳ,ಪ್ರಸಾದ ವಿತರಣೆ,ರಂಗಪೂಜೆ ನಡೆಯಿತು. ದೇವಸ್ಥಾನದ ಗುರಿಕಾರ ಗೋಪಾಲ ಗೌಡ, ಎರಡನೇ ಗುರಿಕಾರ ಓಬಯ್ಯ ಗೌಡ ಕುಕ್ಕೇಡಿ, ಆಡಳಿತ ಮಂಡಳಿ ಸದಸ್ಯರು, ಕೋರ್ಯಾರು ಶ್ರೀ ದುರ್ಗಾಮಹಮ್ಮಾಯೀ ಭಜನ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ವಿವಿಧೆಡೆಯ ೧೮ ಭಜನ ತಂಡಗಳು ಭಜನ ಕಾರ್ಯಕ್ರಮ ನಡೆಸಿಕೊಟ್ಟರು.

More from the blog

ಬಲ್ಲು ಕೊರಗ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನು‌ಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರೂ ಮಂಜೂರಾಗಿದೆ, ಸಮಾಜದ ಎಲ್ಲಾ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು...

ಬಂಟ್ವಾಳದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ

ಬಂಟ್ವಾಳ : ಭರತ ಖಂಡದ ಧಾರ್ಮಿಕ ರಾಯಾಭಾರಿ ಎಂದೇ ಹೆಸರಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನಗೆದ್ದವರು. ಸಂತ ಶ್ರೀ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಆರಾಧ್ಯ ದೈವ...

ಕೆಲಿಂಜ ಮೆಚ್ಚಿ ಜಾತ್ರೆಯಲ್ಲಿ ಸಾಧಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೆಲಿಂಜ ಘಟಕದ ಅಶ್ರಯದಲ್ಲಿ ಕೆಲಿಂಜ ಮೆಚ್ಚಿ ಜಾತ್ರೆಯ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವನರ್ತಕರಾದ ಶ್ರೀ...

ಚರಂಡಿಗೆ ಬಿದ್ದ ರಿಕ್ಷಾ : ಚಾಲಕ ಸಾವು, ಮಕ್ಕಳಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ...