Wednesday, February 12, 2025

ಭಗವಂತನ ಸಂಪ್ರೀತಿಯೇ ಮನುಷ್ಯನ ನಿಜವಾದ ಆಸ್ತಿ: ಪಿ.ಬಿ.ಇಬ್ರಾಹಿಂ ಭಟ್ಕಳ

ಬಂಟ್ವಾಳ : ಮನುಷ್ಯನ ಪ್ರತಿಯೊಂದು ಸತ್ಕಾರ್ಯಗಳು ಅಲ್ಲಾಹನ ಸಂಪ್ರೀತಿಗಾಗಿ ಇರಬೇಕು. ಆತನ ಸಂಪ್ರೀತಿಯೇ ಮನುಷ್ಯನ ನಿಜವಾದ ಆಸ್ತಿಯಾಗಿದ್ದು ಇದರಿಂದ ಇಹ ಪರ ವಿಜಯ ಸಾದ್ಯ ಎಂದು ಪಿಡಬ್ಲೂಡಿ ಗುತ್ತಿಗೆದಾರ ಹಾಜಿ ಪಿ.ಬಿ.ಇಬ್ರಾಹಿಂ ಭಟ್ಕಳ ಹೇಳಿದ್ದಾರೆ.
ಕಲ್ಲಡ್ಕ -ಕೆ.ಸಿ.ರೋಡ್‌ನ ಮಸ್ಜಿದ್ ಅಲ್ ಜಾಮಿಅ ಆಯಿಷಾ ಇಬ್ರಾಹಿಂ ಇದರ ವತಿಯಿಂದ ಇಲ್ಲಿನ ಶೈಖುನಾ ಜಬ್ಬಾರ್ ಉಸ್ತಾದ್ ವೇದಿಕೆಯಲ್ಲಿ ನಡೆದ ಧಾರ್ಮಿಕ ಪ್ರವಚನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಹುಟ್ಟೂರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಕಲ್ಲಡ್ಕ ಮುಹಿಯ್ಯುದ್ದೀನ್ ಜುಮಾ ಮಸೀದಿ ಖತೀಬ್ ಇಸ್ಮಾಯಿಲ್ ಫೈಝಿ ಉದ್ಘಾಟಿಸಿದರು. ಕೆ.ಸಿ.ರೋಡ್ ಮಸೀದಿ ಅಧ್ಯಕ್ಷ ಪಿ.ಬಿ.ಬಶೀರ್ ಅಧ್ಯಕ್ಷತೆ ವಹಿಸಿದ್ದರು. ಹಾಫಿಲ್ ನಿಜಾಮುದ್ದೀನ್ ಅಝರಿ ಕುಮ್ಮನಂ ಮುಖ್ಯ ಪ್ರಭಾಷಣಗೈದರು.
ಕಲ್ಲಡ್ಕ ಎಂ.ಜೆ.ಎಂ.ಅದ್ಯಕ್ಷ ಹಾಜಿ ಜಿ ಅಬೂಬಕರ್ ಗೋಳ್ತಮಜಲು, ಹಾಜಿ ಸುಲೈಮಾನ್ ನಾರ್ಶ, ಹಾಜಿ ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು, ಹಾಜಿ ಬಿ.ಕೆ.ಇದ್ದಿನಬ್ಬ ಕಲ್ಲಡ್ಕ, ಜಿ.ಎಸ್.ಸುಲೈಮಾನ್ ಹಾಜಿ ಕಲ್ಲಡ್ಕ, ಹಾಜಿ ಜಿ.ಯೂಸುಫ್ ಗೋಳ್ತಮಜಲು, ನವಾಝ್ ಕೆ.ಎನ್, ಹಾಜಿ ಕೆ.ಎಂ.ಶಾಫಿ, ಹಾಜಿ ಅಬ್ದುಲ್ ಹಮೀದ್ ಗೋಲ್ಡನ್, ದ.ಕ.ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಸದಸ್ಯ ನಝೀರ್ ಮಠ, ಹಾಜಿ ಬಿ.ಎ.ಖಾದರ್ ಕೆ.ಸಿ.ರೋಡ್, ಪಿ. ಬಿ. ಶಾಹಿನ್ ಭಟ್ಕಳ, ಪಿ.ಬಿ.ಅಬ್ದುಲ್ ಅಝೀಝ್ ಬೋಳಂಗಡಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೆ.ಸಿ.ರೋಡ್ ಮಸೀದಿ ಖತೀಬ್ ಹೈದರ್ ದಾರಿಮಿ ಸ್ವಾಗತಿಸಿ, ಅಬ್ದುಲ್ಲಾ ಮುಸ್ಲಿಯಾರ್ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...