Tuesday, January 27, 2026

ಭಗವಂತನ ಸಂಪ್ರೀತಿಯೇ ಮನುಷ್ಯನ ನಿಜವಾದ ಆಸ್ತಿ: ಪಿ.ಬಿ.ಇಬ್ರಾಹಿಂ ಭಟ್ಕಳ

ಬಂಟ್ವಾಳ : ಮನುಷ್ಯನ ಪ್ರತಿಯೊಂದು ಸತ್ಕಾರ್ಯಗಳು ಅಲ್ಲಾಹನ ಸಂಪ್ರೀತಿಗಾಗಿ ಇರಬೇಕು. ಆತನ ಸಂಪ್ರೀತಿಯೇ ಮನುಷ್ಯನ ನಿಜವಾದ ಆಸ್ತಿಯಾಗಿದ್ದು ಇದರಿಂದ ಇಹ ಪರ ವಿಜಯ ಸಾದ್ಯ ಎಂದು ಪಿಡಬ್ಲೂಡಿ ಗುತ್ತಿಗೆದಾರ ಹಾಜಿ ಪಿ.ಬಿ.ಇಬ್ರಾಹಿಂ ಭಟ್ಕಳ ಹೇಳಿದ್ದಾರೆ.
ಕಲ್ಲಡ್ಕ -ಕೆ.ಸಿ.ರೋಡ್‌ನ ಮಸ್ಜಿದ್ ಅಲ್ ಜಾಮಿಅ ಆಯಿಷಾ ಇಬ್ರಾಹಿಂ ಇದರ ವತಿಯಿಂದ ಇಲ್ಲಿನ ಶೈಖುನಾ ಜಬ್ಬಾರ್ ಉಸ್ತಾದ್ ವೇದಿಕೆಯಲ್ಲಿ ನಡೆದ ಧಾರ್ಮಿಕ ಪ್ರವಚನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಹುಟ್ಟೂರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಕಲ್ಲಡ್ಕ ಮುಹಿಯ್ಯುದ್ದೀನ್ ಜುಮಾ ಮಸೀದಿ ಖತೀಬ್ ಇಸ್ಮಾಯಿಲ್ ಫೈಝಿ ಉದ್ಘಾಟಿಸಿದರು. ಕೆ.ಸಿ.ರೋಡ್ ಮಸೀದಿ ಅಧ್ಯಕ್ಷ ಪಿ.ಬಿ.ಬಶೀರ್ ಅಧ್ಯಕ್ಷತೆ ವಹಿಸಿದ್ದರು. ಹಾಫಿಲ್ ನಿಜಾಮುದ್ದೀನ್ ಅಝರಿ ಕುಮ್ಮನಂ ಮುಖ್ಯ ಪ್ರಭಾಷಣಗೈದರು.
ಕಲ್ಲಡ್ಕ ಎಂ.ಜೆ.ಎಂ.ಅದ್ಯಕ್ಷ ಹಾಜಿ ಜಿ ಅಬೂಬಕರ್ ಗೋಳ್ತಮಜಲು, ಹಾಜಿ ಸುಲೈಮಾನ್ ನಾರ್ಶ, ಹಾಜಿ ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು, ಹಾಜಿ ಬಿ.ಕೆ.ಇದ್ದಿನಬ್ಬ ಕಲ್ಲಡ್ಕ, ಜಿ.ಎಸ್.ಸುಲೈಮಾನ್ ಹಾಜಿ ಕಲ್ಲಡ್ಕ, ಹಾಜಿ ಜಿ.ಯೂಸುಫ್ ಗೋಳ್ತಮಜಲು, ನವಾಝ್ ಕೆ.ಎನ್, ಹಾಜಿ ಕೆ.ಎಂ.ಶಾಫಿ, ಹಾಜಿ ಅಬ್ದುಲ್ ಹಮೀದ್ ಗೋಲ್ಡನ್, ದ.ಕ.ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿ ಸದಸ್ಯ ನಝೀರ್ ಮಠ, ಹಾಜಿ ಬಿ.ಎ.ಖಾದರ್ ಕೆ.ಸಿ.ರೋಡ್, ಪಿ. ಬಿ. ಶಾಹಿನ್ ಭಟ್ಕಳ, ಪಿ.ಬಿ.ಅಬ್ದುಲ್ ಅಝೀಝ್ ಬೋಳಂಗಡಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೆ.ಸಿ.ರೋಡ್ ಮಸೀದಿ ಖತೀಬ್ ಹೈದರ್ ದಾರಿಮಿ ಸ್ವಾಗತಿಸಿ, ಅಬ್ದುಲ್ಲಾ ಮುಸ್ಲಿಯಾರ್ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...