Saturday, July 5, 2025

ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ

ನರಿಕೊಂಬು ಗ್ರಾಮದ ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಈಗಾಗಲೇ ಆರಂಭಗೊಂಡಿದ್ದು, ತನ್ನಿಮಿತ್ತವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ ಮಂಗಳವಾರ ನಡೆಯಿತು.

ನರಿಕೊಂಬು ದೊಂಪದಬಳಿಯ ನಾಲ್ಕೈತ್ತಾಯ ದೈವಸ್ಥಾನದಿಂದ ಹೊರಟ ಮೆರವಣಿಗೆ ನರಿಕೊಂಬು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಿಂದ ಕುರ್ಚಿಪಲ್ಲ, ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ, ಪಾಣೆಮಂಗಳೂರು ಶ್ರೀ ವೀರವಿಠಲ ದೇವಸ್ಥಾನದಿಂದ ಶ್ರೀ ಭಯಂಕೇಶ್ವರ ಸದಾಶಿವ ಕ್ಷೇತ್ರಕ್ಕೆ ತಲುಪಿತು. ಹನುಮಂತನ ಟ್ಯಾಬ್ಲೊ ಸಹಿತ ವಿವಿಧ ಟ್ಯಾಬ್ಲೊಗಳು, ಚೆಂಡೆ ಸಹಿತ ಆಕರ್ಷಕ ಪ್ರದರ್ಶನಗಳೊಂದಿಗೆ ಸ್ಥಳೀಯ ಗಣ್ಯರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪಪ್ರಜ್ವಲನಗೈದು, ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಲಿ ಎಂದು ಹಾರೈಸಿದರು. ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಬ್ರಹ್ಮಕಲಶ ಮಹೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕರಾದ ಪ್ರಕಾಶ್ ಕಾರಂತ ನರಿಕೊಂಬು, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ರಘು ಸಫಲ್ಯ, ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಸದಸ್ಯರಾದ ಮೋಹನ ಆಚಾರ್ಯ, ಚಂದ್ರಾವತಿ ರತ್ನಾಕರ ನಾಯ್ಕ್, ಕೃಷ್ಣಪ್ಪ ಗಾಣಿಗ, ಸಂಜೀವ ಸಪಲ್ಯ, ಪ್ರಮುಖರಾದ ನಾರಾಯಣ ಸೋಮಯಾಜಿ, ಪುರುಷೋತ್ತಮ ಸಾಲಿಯಾನ್, ಸಂತೋಷ್ ಕುಮಾರ್, ಪ್ರೇಮನಾಥ ಶೆಟ್ಟಿ ಅಂತರ, ಶ್ರೀಷ ರಾಯಸ, ವಸಂತ ಪಿ, ಭುವನೇಶ್, ಪ್ರಕಾಶ್ ಕೋಡಿಮಜಲು, ಪ್ರವೀಣ್ ಕುಮಾರ್, ಪುರುಷೋತ್ತಮ ಬಂಗೇರ, ಕಿಶೋರ್ ಶೆಟ್ಟಿ, ಮೋಹನದಾಸ ಕೊಟ್ಟಾರಿ, ಕಮಲಾಕ್ಷ ಶಂಭೂರು ಸಹಿತ ಪ್ರಮುಖರು ಉಪಸ್ಥಿತರಿದ್ದರು.

More from the blog

Old Bridge: ಪಾಣೆಮಂಗಳೂರು ಸೇತುವೆಯಲ್ಲಿ ಸಂಚಾರಕ್ಕೆ ಬಿಗ್ ರಿಲೀಫ್ ..

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಸಾಮರ್ಥ್ಯ ಪರೀಕ್ಷೆಯನ್ನು ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯ ಅಧಿಕಾರಿಗಳು ಮಾಡಿದ್ದು, ಇದೀಗ ವರದಿಯನ್ನು ಬಂಟ್ವಾಳ ಪುರಸಭಾ ಇಲಾಖೆಗೆ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಬಂಟ್ವಾಳ ತಾಲೂಕು ಪ್ರಾ. ಕೃ. ಪ. ಸ. ಸಂಘಗಳ ಒಕ್ಕೂಟದ ವತಿಯಿಂದ ಗೌರವ ಅಭಿನಂದನಾ ಕಾರ್ಯಕ್ರಮ..

ಬಂಟ್ವಾಳ : ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಮಣಿನಾಲ್ಕೂರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಶೆಟ್ಟಿ, ಕಜೆಕಾರು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ, ಇಡ್ಕಿದು ಸಹಕಾರಿ ಸಂಘದ...

Accident : ಡಿವೈಡರ್ ಗೆ ಡಿಕ್ಕಿಯಾದ ಕಾರು : ಚಾಲಕ ಸಾವು..

ಬಂಟ್ವಾಳ : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಪಾವೂರು ನಿವಾಸಿ ನೌಫಲ್...

Bantwal : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ – ಸುಮೋಟೋ ಕೇಸ್ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣವಾದ watsapp ನಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿ ಸಾರ್ವಜನಿಕರಿಗೆ ಭಯಬೀತಿಯನ್ನುಂಟು ಮಾಡಿ ಸಾರ್ವಜನಿಕ ನೆಮ್ಮದಿ ಕೆಡಿಸುವ ಮಟ್ಟಿಗೆ ಅಪರಾಧ ಮಾಡಿರುವ ವ್ಯಕ್ತಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ...