ಬಂಟ್ವಾಳ: ಅಮ್ಟೂರು ಗ್ರಾಮದ ಬಾಳಿಕೆಯ ಮಾಜಿ ಸೈನಿಕ ಕ್ಯಾಪ್ಟನ್ ಶ್ರೀನಿವಾಸ ಶೆಟ್ಟಿ ಇವರು 25 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ನಿವೃತ್ತಿ ಜೀವನ ನಡೆಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಇವರು ಅನಾರೋಗ್ಯಕ್ಕೊಳಗಾಗಿದ್ದು, ಇವರ ಮನೆಗೆ ರಾಷ್ಟ್ರೀಯ ಸ್ವಯಂಸಸೇವಕ ಸಂಘದ ಪ್ರಮುಖ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಕಮಲಾ ಪ್ರಭಾಕರ ಭಟ್ ಇವರು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.


