Monday, January 26, 2026

ಅಡಕೆ ಮರ ಬಿದ್ದು ಬೆನ್ನುಹುರಿಗೆ ಗಾಯ: ಶಾಸಕರಿಂದ ಗಾಯಾಳುವಿನ ಭೇಟಿ

ಬಂಟ್ವಾಳ: ತಾಲೂಕಿನ  ಬಾಳ್ತಿಲ ಗ್ರಾಮದ ವಸಂತಿ ಆಚಾರ್ಯ ಎಂಬುವವರ ಮೇಲೆ ಅಡಿಕೆ ಮರಬಿದ್ದು ಬೆನ್ನುಹುರಿಗೆ ಗಾಯವಾಗಿ ಎದ್ದೇಳಲಾಗದ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು  ಮಂಗಳವಾರ ಗಾಯಾಳುವಿನ ಮನೆಗೆ  ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ವೈದ್ಯಕೀಯ ಚಿಕಿತ್ಸೆಗೆ ವೈಯುಕ್ತಿಕ ಧನಸಹಾಯವನ್ನು ಮಾಡಿದರು,  ಮಹಿಳೆಯ ಚಿಕಿತ್ಸೆಗೆ 10 ಲಕ್ಷ ರೂವರೆಗೆ ಹಣದ ಅಗತ್ಯವಿದ್ದು , ತೀವ್ರ ಬಡತನದಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ. ಈ ಪ್ರಕರಣವನ್ನು  ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದಲೂ ಗರಿಷ್ಠ ಪ್ರಮಾಣದ   ನೆರವನ್ನು  ಕೊಡಿಸಲು ಪ್ರಯತ್ನಿಸುವುದಾಗಿ ಶಾಸಕ ರಾಜೇಶ್ ನಾಯ್ಕ್ ಭರವಸೆ  ನೀಡಿದರು.    ಈ  ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಚೆನ್ನಪ್ಪ ಕೋಟ್ಯಾನ್ ,  ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ  ದಿನೇಶ್ ಅಮ್ಟೂರು, ಶಿವರಾಜ್, ಮಾಜಿ ತಾಪಂ ಸದಸ್ಯ ಮೋಹನ್ ಪಿ.ಎಸ್, ಬಾಳ್ತಿಲ ಗ್ರಾ. ಪಂ.ಅಧ್ಯಕ್ಷ ವಿಠಲನಾಯ್ಕ್, ಪೂರ್ಣಿಮಾ, ಶರತ್,  ತಾಪಂ ಮಾಜಿ ಉಪಾಧ್ಯಕ್ಷ ಆನಂದ ಎ.ಶಂಭೂರು, ಉದಯ ಶಾಂತಿಲ, ರತ್ನಾಕರ ಶೆಟ್ಟಿ , ವಿಶ್ವನಾಥ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...