ಬಂಟ್ವಾಳ: ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಉದ್ಯಮಿ ಮುತ್ತಪ್ಪ ರೈ ದೇರ್ಲ ಮತ್ತು ಅಜಿತ್ ಶೆಟ್ಟಿ ಕಡಬ ಕೊಡುಗೆಯಾಗಿ ನೀಡಲಿರುವ ಬ್ರಹ್ಮರಥ ಮಂಗಳವಾರ ಕದ್ರಿಯಿಂದ ಆಗಮಿಸಿದ ಬ್ರಹ್ಮ ರಥವನ್ನು ಬಿ.ಸಿ.ರೋಡಿನ ಕೈಕಂಬದಲ್ಲಿ ಅದ್ದೂರಿಯಿಂದ ಸ್ವಾಗತಿಸಲಾಯಿತು.



ಕೈಕಂಬದ ಮುಸ್ಲಿಂ ಬಾಂಧವರು ರಥವನ್ನು ಸ್ವಾಗತಿಸಿದಲ್ಲದೆ, ರ್ಯಾಲಿಯಲ್ಲಿ ಬಂದ ಎಲ್ಲ ಹಿಂದೂ ಬಾಂಧವರಿಗೆ ಜ್ಯೂಸ್ ಹಾಗೂ ಲಡ್ಡು ವಿತರಿಸುವ ಮೂಲಕ ಸೌಹಾರ್ದ ಮೆರೆದರು.
ಬಳಿಕ ಬಿ.ಸಿ ರೋಡ್ ನಲ್ಲಿ ಬಂಟ್ವಾಳದ ಭಕ್ತಾದಿಗಳ ಪರವಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.












