Tuesday, July 1, 2025

‘ಈಶ ಪ್ರೀತಿಯೊಂದಿಗೆ ದೇಶ ಪ್ರೇಮ ಮೊಳಗಬೇಕು’-ಒಡಿಯೂರುಶ್ರೀ

ವಿಟ್ಲ: ಭವ ಸಾಗರದಲ್ಲಿ ಸಂಚರಿಸುವಾಗ ದಿಕ್ಕು ತಪ್ಪದ ಹಾಗೆ ಕರೆದುಕೊಂಡು ಹೋಗಲು ದೇವಾಲಯದ ಅಗತ್ಯವಿದೆ. ಗರ್ಭ ಗೃಹದೊಳಗೆ ದೇವ ಜೀವನ ಸಮ್ಮಿಲನವಿದೆ. ಆಧುನಿಕ ಶಿಕ್ಷಣ ಕ್ರಮ ಗೊಂದಲವಾಗಿದ್ದು, ಮಕ್ಕಳಿಗೆ ಕಾಲಕಾಲಕ್ಕೆ ಸರಿಯಾದ ಮಾರ್ಗದರ್ಶನ ಬೇಕಾಗಿದೆ. ಈಶ ಪ್ರೀತಿಯೊಂದಿಗೆ ದೇಶ ಪ್ರೇಮ ಮೊಳಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಗುರುವಾರ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ನಡೆದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು.
ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶ್ರೀ ಸದ್ಗುರು ಡಾ. ಶಶಿಕಾಂತಮಣಿ ಸ್ವಾಮೀಜಿ ಆಶೀರ್ವಚನ ನೀಡಿ ಪರಂಪರೆಯಿಂದ ಬಂದ ಆಚರಣೆಗಳನ್ನು ನಡೆಸಿದಾಗ ಧರ್ಮ ಜಾಗೃತಿಯಾಗಿ ಸಾನ್ನಿಧ್ಯ ವೃದ್ಧಿಯಾಗುತ್ತದೆ. ಧರ್ಮ ಜಾಗೃತಿಯ ಶಿಕ್ಷಣ ಮಕ್ಕಳಿಗೆ ಅವಶ್ಯಕತೆ ಇದೆ. ದೇವಾಲಯದ ಜೀರ್ಣೋದ್ಧಾರ ಕಾರ್‍ಯ ಊರಿನ ಜನರ ಜವಾಬ್ದಾರಿ ಎಂದು ತಿಳಿಸಿದರು.
ಮಾಜಿ ಶಾಸಕ ರುಕ್ಮಯ ಪೂಜಾರಿ, ಉದ್ಯಮಿ ವಸಂತ ಪೈ ಬದಿಯಡ್ಕ, ಮಾಣಿಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮೊಕ್ತೇಸರ ಗಣೇಶ್ ಕುಮಾರ್ ದೇಲಂತಬೆಟ್ಟು, ನಮ್ಮ ಕುಡ್ಲದ ಲೀಲಾಕ್ಷ ಕರ್ಕೇರ, ಐಲ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ನಾರಾಯಣ ಹೆಗ್ಡೆ ಕೋಡಿಬೈಲು, ಮುರಳೀಧರ ರೈ ಮಠಂತಬೆಟ್ಟು, ನಿವೃತ್ತ ಸೇನಾಧಿಕಾರಿ ವಿ. ಪಾರ್ಶ್ವನಾಥ ಶೆಟ್ಟಿ ತಿರುವೈಲುಗುತ್ತು, ಕಕ್ಕೆಪದವು ಪಂಚದುರ್ಗಾ ಪ್ರೌಢಶಾಲೆ ಜಗನ್ನಾಥ ಶೆಟ್ಟಿ ಕಕ್ಕೆಪದವು, ದಯಾ ಸಾಗರ ಚೌಟ ಕಳ್ಳಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘ ವಿಟ್ಲ ತಾಲೂಕು ಸಂಪರ್ಕ ಪ್ರಮುಖ್ ವಿನೋದ್ ಶೆಟ್ಟಿ ಅಡ್ಕಸ್ಥಳ ಭಾಗವಹಿಸಿದ್ದರು.
ಭುವನಾ, ನಿಷ್ಮಿತಾ ಪ್ರಾರ್ಥಿಸಿದರು. ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಡಿವಾಯಿ ನಾರಾಯಣ ರೈ ಸ್ವಾಗತಿಸಿದರು. ಕಾರ್‍ಯಾಧ್ಯಕ್ಷ ಎಂ. ಚಂದ್ರಹಾಸ ಕಾವ ಗುರುಪುರ ವಂದಿಸಿದರು. ಮಂಜುನಾಥ ಶೆಟ್ಟಿ ಕಲಾತ್ತಿಮಾರು, ಪಾಲಾಕ್ಷ ರೈ ಕಲಾತ್ತಿಮಾರು ಕಾರ್‍ಯಕ್ರಮ ನಿರೂಪಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...