Thursday, February 13, 2025

ಟ್ರಾಫಿಕ್ ಎಸ್.ಐ.ಗೆ ಬೀಳ್ಕೋಡುಗೆ

ಬಂಟ್ವಾಳ: ಮೆಲ್ಕಾರ್ ಸಂಚಾರಿ ಠಾಣಾ ಎಸ್.ಐ. ನಾರಾಯಣ ರೈ  ಅವರು ವಯೋನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮೆಲ್ಕಾರ್ ಟ್ರಾಫಿಕ್ ಠಾಣಾ ವತಿಯಿಂದ ಪಾಣೆಮಂಗಳೂರು ಸುಮಂಗಲ ಕಲ್ಯಾಣ ಮಂಟಪ ದಲ್ಲಿ ಬೀಳ್ಕೋಡುಗೆ ಕಾರ್ಯಕ್ರಮ ನಡೆಯಿತು.
34 ವರ್ಷ ಎರಡು ದಿನಗಳ ಕಾಲ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇವರು ಎಸ್.ಐ.ಆಗಿ ಪದೋನ್ನತಿ ಹೊಂದಿ ನಿವೃತ್ತಿ ಹೊಂದಿದರು.
ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಾಯಕ ಪೋಲೀಸ್ ಅಧೀಕ್ಷಕರು ವಿಕ್ರಂ ಅಮ್ಟೆ ಮಾತನಾಡಿ ಸುದೀರ್ಘ ಸೇವಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ನಿವೃತ್ತಿ ಹೊಂದಿರುವುದು ಇಲಾಖೆಗೆ ಗೌರವ ತಂದಿದೆ.
ಇವರ ಕಾರ್ಯವೈಖರಿ ಯುವಕರಿಗೆ ಮಾದರಿಯಾಗಿದೆ ಎಂದು ಅವರು ಹೇಳಿದರು. ‌
ಮುಖ್ಯ ಅತಿಥಿಯಾಗಿ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ ಅವರು ಮಾತನಾಡಿ ಯುವಕರಿಗೆ ಇಂತಹ ಹಿರಿಯ ಅಧಿಕಾರಿಗಳು ಆದರ್ಶ ವಾಗಿದ್ದಾರೆ ಎಂದರು.
ವೇದಿಕೆಯಲ್ಲಿ ಪ್ರೋ.ಡಿ.ವೈ..ಎಸ್.ಪಿ.ಗೋವಿಂದ ರಾಜು, ಸಂಚಾರಿ ಪೋಲೀಸ್ ಠಾಣಾ ಎಸ್. ಐ. ಮಂಜುನಾಥ್, ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಸುಧಾಕರ ತೋನ್ಸೆ, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ, ವಿಟ್ಲ ಎಸ್.ಐ.ಯಲ್ಲಪ್ಪ ಎಸ್. ಹಾಗೂ ಸಿಬ್ಬಂದಿ ಗಳು ಉಪಸ್ಥಿತರಿದ್ದರು. ‌
ಮೆಲ್ಕಾರ್ ಸಂಚಾರಿ ಪೋಲೀಸ್ ಠಾಣಾ ಎಸ್. ಐ.ಮಂಜುನಾಥ್ ಸ್ವಾಗತಿಸಿ , ಪೋಲೀಸ್ ಸಿಬ್ಬಂದಿ ವಿವೇಕ್ ವಂದಿಸಿದರು. ‌

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...