Friday, January 30, 2026

ಮುಖ್ಯೋಪಾಧ್ಯಾಯ ರಾಮಚಂದ್ರ ರಾವ್ ಗೆ ಬೀಳ್ಕೋಡುಗೆ ಸಂಭ್ರಮ

ಬಂಟ್ವಾಳ : ಸಾಮಾಜಿಕ ಸಾಮರಸ್ಯದ ಹೆಗ್ಗುರುತಾಗಿ ಗೂಡಿನಬಳಿ ಅನುದಾನಿತ ಪ್ರಾಥಮಿಕ ಶಾಲೆಯ ಸಮಗ್ರ ಅಭಿವೃದ್ಧಿಯನ್ನು ಮಾಡಿ ಮಾನವೀಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿರುವ ಬಿ.ರಾಮಚಂದ್ರ ರಾವ್ ಎಲ್ಲರ ಪ್ರೀತಿಗೂ ಪಾತ್ರರಾಗಿದ್ದಾರೆ. ಬಹುಮುಖ ಪ್ರತಿಭೆಯಿಂದ 38 ವರ್ಷಗಳ ಸುದೀರ್ಘ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.


ಅವರು ಭಾನುವಾರ ಗೂಡಿನಬಳಿ ಮಸೀದಿ, ಹಯಾತುಲ್ ಇಸ್ಲಾಂ ಸಂಘ, ಹಯಾತುಲ್ ವಿದ್ಯಾ ಸಂಸ್ಥೆಗಳ ವತಿಯಿಂದ ಏರ್ಪಡಿಸಲಾದ ನಿವೃತ್ತ ಮುಖ್ಯಶಿಕ್ಷಕ ಬಿ.ರಾಮಚಂದ್ರ ರಾವ್ ರವರ ಶುಭ ವಿದಾಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ಶುಭ ಹಾರೈಸಿದರು. ನಿವೃತ್ತರನ್ನು ವಿದ್ಯಾಸಂಸ್ಥೆಯಿಂದ ಚಿನ್ನದ ಸರ, ಉಂಗುರ ತೊಡಿಸಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಹೆಚ್ ಖಾದರ್, ಪುರಸಭಾ ಸದಸ್ಯೆ ಝೀನತ್ ಫಿರೋಝ್, ಜಿಲ್ಲಾ ಅನುದಾನಿತ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಕೆ.ಎಮ್.ಕೆ ಮಂಜನಾಡಿ , ಕರ್ನಾಟಕ ಅಲ್ಪಸಂಖ್ಯಾತರ ಮಾಜಿ ಅಧ್ಯಕ್ಷ ಪಿ.ಎ. ರಹೀಮ್, ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷ ಹರ್ಷ ರಾಜ್, ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಯೂಸುಫ್, ಹಯಾತುಲ್ ಇಸ್ಲಾಂ ಆಂಗ್ಲಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಪಾತಿಮತ್ ನೌಶೀನ, ದಾರುಲ್ ಇಸ್ಲಾಂ ಅನುದಾನಿತ ಶಾಲೆ ಅಕ್ಕರಂಗಡಿಯ ಜಿ.ಎಂ. ನೂರುದ್ದೀನ್ ಅಭಿನಂದಿಸಿ ಮಾತನಾಡಿದರು.
ವೇದಿಕೆಯಲ್ಲಿ ಪ್ರಮುಖರಾದ ಪುರಸಭಾ ಸದಸ್ಯೆ ಸಂಶದ್ ಬಾನು, ಸುರೇಶ್ ಸಾಲ್ಯಾನ್ ಚಿಕ್ಕಯ ಮಠ, ಜಾಯ್ ಡಿಕ್ರೂಜ್ ಬಳಕ, ಕೆ. ಅಬ್ದುಲ್ ಬಶೀರ್ ಗೂಡಿನ ಬಳಿ, ಎನ್.ಎ ಅಬ್ದುಲ್ಲ, ಹಯಾತುಲ್ ಇಸ್ಲಾಂ ಅ.ಹಿ.ಪ್ರಾ.ಶಾಲೆ ಗೂಡಿನ ಬಳಿ ಸಂಚಾಲಕ ಜಿ.ಕೆ ಅಹಮ್ಮದ್ ಬಾವ, ಮುಖ್ಯೋಪಾಧ್ಯಾಯ ಸುರೇಂದ್ರ ರಾವ್ ಕೆ. , ಅಬ್ದುಲ್ ಹಮೀದ್ ಮಾಚಾರ್, ಟಿ.ಮಹಮ್ಮದ್, ಅಬ್ದುಲ್ ಸತ್ತಾರ್ , ಅಹಮ್ಮದ್ ಶಬೀರ್ ಅಝರಿ, ಅಬ್ದುಲ್ ರಶೀದ್ ಜಿ.ಕೆ. ಅಬ್ದುಲ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ಪುರಸಭೆ ಮಾಜಿ ಉಪಾಧ್ಯಕ್ಷ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಫಿರೋಝ್ ವಂದಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...