Friday, June 27, 2025

ವಿಟ್ಲ: ಬಿಲ್ಲವ ಸಂಘದ ವತಿಯಿಂದ ವಾರ್ಷಿಕ ಶ್ರೀಸತ್ಯನಾರಾಯಣ ಪೂಜೆ

ವಿಟ್ಲ: ವಿಟ್ಲ ಬಿಲ್ಲವ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಜೂ. ೧೬ ರಂದು ಇಲ್ಲಿನ ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ವಾರ್ಷಿಕ ಶ್ರೀಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ವೇತನ ವಿತರಣೆ, ಸನ್ಮಾನ ಕಾರ್‍ಯಕ್ರಮ ನಡೆಯಲಿದೆ.
ಧಾರ್‍ಮಿಕ ಸಭೆಯನ್ನು ಕಾರ್ಕಳ ಹೊಸ್ಮಾರು ಬಲ್ಯೊಟ್ಟು ಶ್ರೀಗುರುಕೃಪಾ ಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ ಪಾಣೆಮಜಲು ಅಧ್ಯಕ್ಷತೆ ವಹಿಸಲಿದ್ದು, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ರೋಟರಿ ಜಿಲ್ಲಾ ಗವರ್ನರ್ ರೋಹಿನಾಥ ಪಾದೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್‍ಯದರ್ಶಿ ಜಯಪ್ರಕಾಶ್ ಎ., ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಡಾ. ಕಿಶೋರ್ ಬಂಗೇರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಲತಾ ಸೋಮಶೇಖರ್ ಭಾಗವಹಿಸಲಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...