Friday, July 11, 2025

ಪಕ್ಷಕ್ಕೆ ತಾಯಿ ಸ್ಥಾನ ನೀಡುವ ಮೂಲಕ ಸಂಘಟನೆಯನ್ನು ಬಲಪಡಿಸುವ ಕೆಲಸ ಬಿಜೆಪಿ ಕಾರ್ಯಕರ್ತರಿಂದ ಮಾತ್ರ ಸಾಧ್ಯ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಪಕ್ಷವನ್ನು ತಾಯಿ ಸ್ಥಾನದಲ್ಲಿರಿಸಿ ಸಂಘಟನೆಯನ್ನು ಮಾಡಿ ದೇಶಕ್ಕಾಗಿ ಹೋರಾಟ ನಡೆಸಿದ ಕಾರ್ಯಕರ್ತರ ಶ್ರಮದ ಫಲವಾಗಿ ಇಂದು ಭಾರತ ಸಶಕ್ತ ವಾಗಿದೆ, ಬಾಳ್ತಿಲ ಗ್ರಾಮದ ರೀತಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದರೆ ಪ್ರತಿ ಗ್ರಾಮವೂ ಬಾಳ್ತಿಲ ಗ್ರಾಮವಾಗುತ್ತದೆ ,

ಹಳ್ಳಿಯಿಂದ ದಿಲ್ಲಿವರೆಗೆ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರ ಪಡೆಯಬೇಕು,ಈ ನಿಟ್ಟಿನಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಿ, ಚುನಾವಣಾ ರೂಪುರೇಷೆಗಳನ್ನು ತಯಾರಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 5 ಬೂತ್ ಗಳ ಅಧ್ಯಕ್ಷರುಗಳ ಮನೆಗೆ ಬೇಟಿ ನೀಡಿ ಅಧ್ಯಕ್ಷ ರಿಗೆ ಗೌರವ ಸಲ್ಲಿಸಿ ಮನೆಗೆ ನಾಮಫಲಕ ಅನಾವರಣ ಮಾಡಿದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

 

ದೀನ್ ದಯಾಳ್ ಅವರ ಅಂತ್ಯೋದಯದ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಯಕರು ಸಾಕಾರಗೊಳಿಸಿದ್ದಾರೆ .

ನಮ್ಮ ಕಾಲದಲ್ಲಿ ಯಾವುದೇ ಗೊಂದಲವಿಲ್ಲದೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಾಗುತ್ತಿದೆ, ಆರ್ಟಿಕಲ್ಸ್ 370 ರದ್ದು ಅಗಿದೆ ಎಂಬುದಕ್ಕಿಂತ ದೊಡ್ಡ ಸಂತೋಷ ಇನ್ನೊಂದಿಲ್ಲ ಎಂದು ಅವರು ಹೇಳಿದರು.

65 ಕೋಟಿ ಜನರಿಗೆ ಉಚಿತ ವ್ಯಾಕ್ಸಿನೇಷನ್‌ ನೀಡಿದ ಪ್ರಧಾನಿ ಮೋದಿಯವರ ಸಾಧನೆ ಜಗತ್ತಿನಲ್ಲಿ ಯಾರು ಮಾಡಿಲ್ಲ ಎಂದು ಅವರು ಹೇಳಿದರು.

ಹಿರಿಯರ ಚಿಂತನೆಗಳನ್ನು, ಕನಸುಗಳನ್ನು ನನಸು ಮಾಡುವ ಮಹತ್ಕಾರ್ಯ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವುದು ನಮ್ಮ ಭಾಗ್ಯವೇ ಸರಿ ಎಂದರು.

ಕಳೆದ 70 ವರ್ಷಗಳ ಕಾಂಗ್ರೇಸ್ ಆಡಳಿತ ಹಾಗೂ ಪ್ರಧಾನಿ ಮೋದಿಯವರ 7 ,ವರ್ಷದ ಅಧಿಕಾರದ ಅವಧಿಯ ಸಾಧನೆ ತುಲನೆ ಮಾಡಿದರೆ ಗೊತ್ತಾಗುತ್ತದೆ.

ಭಾರತವನ್ನು ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರ ಮಾಡಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ ಎಂದು ಅವರು ಹೇಳಿದರು.

ಬೂತ್ ಸಂಖ್ಯೆ 155 ಇದರ ಅಧ್ಯಕ್ಷ ಹಿರಣ್ಮಯಿ , ಬೂತ್ ಸಂಖ್ಯೆ 156 ರ ಅಧ್ಯಕ್ಷ ಶಿವರಾಜ್ ಶೆಟ್ಟಿ, ಬೂತ್ ಸಂಖ್ಯೆ 157 ರ ಅಧ್ಯಕ್ಷ ದೀಪಕ್ ಶೆಟ್ಟಿ, ಬೂತ್ ಸಂಖ್ಯೆ 158 ರ ಅಧ್ಯಕ್ಷ ರವಿ ಬೈಲು, ಬೂತ್ ಸಂಖ್ಯೆ 159 ರ ಅಧ್ಯಕ್ಷೆ ಲಕ್ಮೀಗೋಪಾಲ ಆಚಾರ್ಯ ಅವರ ಮನೆಗೆ ಶಾಸಕರು ಬಂಟ್ವಾಳ ಬಿಜೆಪಿ ಸಮಿತಿ ಅಧ್ಯಕ್ಷ ಹಾಗೂ ಪ್ರಮುಖರು ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯಕರ್ತರ ಭಾವನೆಗಳಿಗೆ , ಸಂಘಟನಾತ್ಮಕ ಯೋಜನೆಗಳಿಗೆ, ಯೋಚನೆಗಳಿಗೆ ಶಕ್ತಿ ನೀಡುವ ಉದ್ದೇಶದಿಂದ ಶಾಸಕರು ಪ್ರತಿ ಬೂತ್ ಗಳ ಅಧ್ಯಕ್ಷ ರ ಮನೆಗೆ ಬೇಟಿ ಹಾಗೂ ಕಾರ್ಯಕರ್ತರ ಜೊತೆ ಮಾತನಾಡಿ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲು ಈ ಕಾರ್ಯಕ್ರಮ ಮಾಡಿದ್ದೇವೆ ಎಂದು ಅವರು ಹೇಳಿದರು.

ಪಕ್ಷಕ್ಕೆ ಶಕ್ತಿ ತುಂಬುವ ಕೆಲಸದ ಜೊತೆಗೆ ಮತದಾರರನ್ನು ಬೇಟಿ ಮಾಡಿ ಅವರ ಸಮಸ್ಯೆ ಗಳಿಗೆ ಸ್ಪಂದಿಸುವ ಕೆಲಸ ಕಾರ್ಯ ಕರ್ತರ ಮೂಲಕ ಆಗಬೇಕಾಗಿದೆ.

ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಮಾತನಾಡಿ ದೇಶ, ಸಂಸ್ಕೃತಿ , ಅಚಾರ ವಿಚಾರಗಳಿಗೆ ಶಕ್ತಿ ನೀಡಿ ರಾಷ್ಟ್ರೀಯ ವಿಚಾರಗಳ ಮೂಲಕ ರಾಜಕೀಯಕ್ಕೆ ಭಾರತೀಯ ಜನತಾ ಪಕ್ಷ ಬಂದಿದೆ ಎಂದರು.

ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್ ಮಾತನಾಡಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಸ್ವಂತ ಹಣ ಖರ್ಚು ಮಾಡಿದ ಜಿಲ್ಲೆಯ ಏಕೈಕ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಾಗಾಗಿ ಅಂತಹ ಓರ್ವ ಬಂಗಾರದ ಗುಣದ ವ್ಯಕ್ತಿಯ ಶ್ರಮಕ್ಕೆ ನಾವು ಜೊತೆಯಾಗಿ ಕೆಲಸ ಮಾಡಬೇಕಾಗಿದೆ, ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ಕೊಡುವ ಎಂದರು.

ನಾಮಫಲಕ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರನ್ನು ಚೆಂಡೆ ಬ್ಯಾಂಡ್, ವಾದ್ಯ ಹಾಗೂ ಆರತಿ ಬೆಳಗಿ ಹಣೆಗೆ ಕುಂಕುಮ ಹಚ್ಚಿ ತಿಲಕವಿಟ್ಟು ಸ್ವಾಗತಿಸಿದರು.

ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ, ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ವಿಠಲ ನಾಯ್ಕ್, ಲತೀಶ್, ರಂಜಿನಿ, ಮಮತ, ಆನಂದ ಶೆಟ್ಟಿ, ಹರಿಣಾಕ್ಷಿ, ಉತ್ತಮ್ ಕುಮಾರ್, ಚಂದ್ರಶೇಖರ, ಶಿವರಾಜ್ ಶೆಟ್ಟಿ, ಆಶೋಕ್, ಮಲ್ಲಿಕಾ, ಚೈತ್ರ, ಶೋಭಾ, ಬಿ.ಕೆ, ಅಣ್ಣು ಪೂಜಾರಿ ರಾಜೇಶ್, ಹರಿಣಾಕ್ಷಿ,

ಪ್ರಮುಖರಾದ ಕಮಲಾಕ್ಷಿ ಕೆ.ಪೂಜಾರಿ, ಸುಲೋಚನ ಜಿ.ಕೆ.ಭಟ್, ಚೆನ್ನಪ್ಪ ಆರ್.ಕೋಟ್ಯಾನ್, ರಮನಾಥ ರಾಯಿ, ಗಣೇಶ್ ರೈ ಮಾಣಿ, ಆನಂದ ಶಂಭೂರು, ದಿನೇಶ್ ಅಮ್ಟೂರು , ಪ್ರಕಾಶ್ ಅಂಚನ್, ಜನಾರ್ದನ ಬೊಂಡಾಲ, ಮೋಹನ್ ಪಿ‌.ಎಸ್, ಭಾರತಿ ಚೌಟ, ಲಖಿತ ಆರ್. ಶೆಟ್ಟಿ, ಲೋಕಾನಂದ, ರಮೇಶ್, ಡೊಂಬಯ್ಯ ಟೈಲರ್, ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...