ಬಂಟ್ವಾಳ: ಮರದಿಂದ ಬಿದ್ದ ಗಂಭೀರವಾಗಿ ಗಾಯಗೊಂಡು ಸದ್ಯ ಮಲಗಿದ ಸ್ಥಿತಿಯಲ್ಲೆ ಇರುವ ಬಿಜೆಪಿ ಕಾರ್ಯಕರ್ತ ಸುದೇಶ್ ಆಚಾರ್ಯ ಉಪ್ಪಿರ ಅವರ ಮನೆಗೆ ಆರ್. ಎಸ್. ಎಸ್ ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ರವಿವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.




ಈ ಸಂದರ್ಭದಲ್ಲಿ ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನ ಕುಮಾರ್ ಚೌಟ, ಬಿಜೆಪಿ ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಆರಂಬೋಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಹುಲಿಮೇರು, ಬಂಟ್ವಾಳ ಬಿಜೆಪಿ ಮಂಡಲದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ದಂಬೆದಾರ್, ಪ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಮತ್ತಿತರರಿದ್ದರು.

