Wednesday, February 12, 2025

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಭಯೋತ್ಪಾದಕ ಪೇಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ನ್ನು ಉದ್ದೇಶಸಿ ಮಾತನಾಡಿದ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕರ್ನಾಟಕದ ಆತ್ಮ ಪ್ರಜಾಪ್ರಭುತ್ವದ ದೇಗುಲವಾಗಿರುವ ವಿಧಾನಸೌಧದ ಒಳಗೆ ದೇಶದ್ರೋಹದ ಕೆಲಸವಾಗಿರುವ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇದು ಸಿದ್ದರಾಮಯ್ಯ ಅವರ ಎಂಟು ತಿಂಗಳ ಸಾಧನೆಯಾಗಿದೆ ಎಂದು ಆರೋಪ ಮಾಡಿದರು.

ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಇಂದು ಕೆಟ್ಟ ಕೆಲಸಕ್ಕೆ ಇಳಿದಿರುವುದು ದುರಂತ ಎಂದು ಹೇಳಿದರು. ಸುಳ್ಳಿನ ಸರಮಾಲೆಯನ್ನು ಸೃಷ್ಟಿ ಮಾಡಿರುವ ಸಿದ್ದರಾಮಯ್ಯ ಸರಕಾರ, ಪಾಕಿಸ್ತಾನದ ಪರವಾದ ಘೋಷಣೆಯನ್ನು ಇಲ್ಲ ಎಂದು ಹೇಳಲು ಹೊರಟಿದೆ ಎಂದು ಆರೋಪ ಮಾಡಿದರು.

ರಾಜ್ಯದಲ್ಲಿ ಬಾಂಬ್ ಬಿದ್ದರು ಅವರನ್ನು ಬಂಧಿಸುವ ಕೆಲಸ ಮಾಡಲ್ಲ ಯಾಕೆ ಅಂದರೆ ಕಾಂಗ್ರೆಸ್ ಪಕ್ಷದ ಮತದಾರರ ಬುಟ್ಟಿಯೇ ಬಾಂಬ್ ಹಾಕುವರ ಸಂಸ್ಕೃತಿ ಎಂದು ಆರೋಪ ಮಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ಶಿಕ್ಷೆ ನೀಡದ ಫಲವಾಗಿ ಮುಂದುವರಿದ ಭಾಗವಾಗಿ ಬಾಂಬ್ ಸ್ಫೋಟಕ್ಕೆ ಮುಂದಾಗಿರುವ ಘಟನೆ ನಡೆದಿದೆ. ರಾಜ್ಯ ಸರಕಾರ ಇದೇ ರೀತಿ ಭಯೋತ್ಪಾದಕ ರಿಗೆ ಸಹಕಾರ ನೀಡುತ್ತಾ ಬಂದರೆ ಮುಂದೊಂದು ದಿನ ಬಂಟ್ವಾಳ ದಲ್ಲಿಯೂ ಬಾಂಬ್ ಬ್ಲಾಸ್ಟ್ ಆಗಬಹುದು ಎಂದು ತಿಳಿಸಿದರು.

ಉಗ್ರವಾದಿಗಳ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸಂಪರ್ಕವಿರುವುದಕ್ಕೆ ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಕಿಯೋನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆರೋಪ ಮಾಡಿದರು.

ಎರಡು ದಿನಗಳ ಹಿಂದೆ ವಿಧಾನ ಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಆರೋಪಿಗಳನ್ನು ಬಂಧಿಸುವ ತಾಕತ್ತು ಯಾಕಿಲ್ಲ ಎಂದು ಅವರು ಪ್ರಶ್ನಿಸಿದರು.

ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಬಾಂಬ್ ಬೀಳುವುದು ಸಿದ್ದರಾಮಯ್ಯ ಅವರ ಎರಡನೇ ಗ್ಯಾರಂಟಿ ….ಜೊತೆಗೆ ಇದೇ ರೀತಿ ಗ್ರಾಮಗ್ರಾಮದಲ್ಲಿ ಪಾಕಿಸ್ತಾನ ಕ್ಕೆ ಜೈಕಾರ ಕೂಗುವುದು ಮೂರನೇ ಗ್ಯಾರಂಟಿ ಘೋಷಣೆ ಮಾಡುತ್ತಾರೆ ಎಂದು ಹೇಳಿದ ಅವರು, ದೇಶದ ಭಯೋತ್ಪಾದಕ ಕೃತ್ಯಗಳಿಗೆ ಸಹಕಾರ ನೀಡಿ ದೇಶದಲ್ಲಿ ಉಗ್ರವಾದಕ್ಕೆ ಸಹಕಾರ ನೀಡುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು ‌.

ಮಾಜಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಾತನಾಡಿ, ಡಿಕೆಶಿ ಬ್ರದರ್ಸ್ ಬಾಂಬ್ ಬ್ಲಾಸ್ಟ್ ಮಾಡಲು ಹೊರಟಿದ್ದಾರೆ ಎಂದು ಆರೋಪ ಮಾಡಿದರು.

ದೇವಸ್ಥಾನದ ಹುಂಡಿಯಿಂದ ಕದಿಯುವ ಹಣ ಆರಾಧನ ಎಂಬ ಯೋಜನೆಗೆ ಹೋಗುತ್ತಿದ್ದು,ಈ ಹಣವನ್ನು ಅನ್ಯಕೋಮಿನ ದೇವಾಲಯಗಳಿಗೆ ಬಳಸಬಹುದು ,ಮಸೀದಿಗಳಿಗೆ ಚರ್ಚ್ ಗಳಿಗೆ ಹಿಂದೂ ದೇವಸ್ಥಾನದ ಹಣವನ್ನು ನೀಡಲು ಹೊರಟ ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಪ್ಪ ಪೂಜಾರಿ, ಸುಲೋಚನ ಜಿ.ಕೆ.ಭಟ್,ದೇವದಾಸ್ ಶೆಟ್ಟಿ, ಡೊಂಬಯ್ಯ ಅರಳ, ವಜ್ರನಾಥ್ ಕಲ್ಲಡ್ಕ, ಕಮಲಾಕ್ಷಿ ಕೆ.ಪೂಜಾರಿ, ಲಖಿತಾ ಆರ್ ಶೆಟ್ಟಿ, ರಾಮ್ ದಾಸ್ ಬಂಟ್ವಾಳ,ಚೆನ್ನಪ್ಪ ಕೋಟ್ಯಾನ್,ತುಂಗಪ್ಪ ಬಂಗೇರ, ದಿನೇಶ್ ಅಮ್ಟೂರು,ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಶೆಟ್ಟಿ,ಪುರುಷೋತ್ತಮ ಸಾಲಿಯಾನ್, ಜನಾರ್ದನ ಬೊಂಡಾಲ, ಆನಂದ ಶಂಭೂರು, ಕಿಶೋರ್ ಪಲ್ಲಿಪಾಡಿ, ಮೋನಪ್ಪ ದೇವಸ್ಯ, ಶುಭಕರ ಶೆಟ್ಟಿ, ಚಿದಾನಂದ ರೈ ಕಕ್ಯ, ಸಂತೋಷ್ ರಾಯಿಬೆಟ್ಟು, ಕೇಶವ ದೈಪಲ, ರಮನಾಥ ರಾಯಿ, ಕಾರ್ತಿಕ್ ಬಲ್ಲಾಳ್,ರೋನಾಲ್ಡ್ ಡಿ.ಸೋಜ, ವಸಂತ ಕಕ್ಯಪದವು,ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ರೈ ಮಾಣಿ, ವಿಜಯ್ ರೈ, ಮೋಹನ್ ಪಿ.ಎಸ್.ಸದಾನಂದ ನಾವೂರ, ಹರೀಶ್ ರೈ ಪೆರಾಜೆ, ಗೋವಿಂದ ಪ್ರಭು, ಹರಿಪ್ರಸಾದ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಪ್ರತಿಭಟನೆಯ ಕೊನೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ಗೆ ಬೆಂಕಿ ನೀಡಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...