Tuesday, July 8, 2025

ನಳಿನ್ 2 ಲಕ್ಷ ಅಂತರದಲ್ಲಿ ಗೆಲುವು: ರಾಜೇಶ್ ನಾಯ್ಕ್ ವಿಶ್ವಾಸ

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರ ಈ ಬಾರಿ 2 ಲಕ್ಷ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 16 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದು , ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ 20ಸಾವಿರ ಅಂತರ ನೀಡುವ ವಿಶ್ವಾಸ ವಿದೆ ಎಂದು ಅವರು ಹೇಳಿದರು.

ರಾಷ್ಟ್ರೋತ್ತಾನ, ಮಹಿಳೆಯರಿಗೆ ಸ್ವಾವಲಂಬಿ ಬದುಕು, ಆರ್ಥಿಕ ವ್ಯವಸ್ಥೆಯ ಬಲಪಡಿಸುವಿಕೆ, ಹಾಗಾಗಿ ಮೋದಿಯವರನ್ನು ಮತ್ತೋಮ್ಮೆ ಪ್ರಧಾನಿಯಾಗಿ ಆರಿಸುತ್ತಾರೆ ಎಂದು ಅವರು ಹೇಳಿದರು.

ಜಿಲ್ಲೆ ಹಾಗೂ ಕೇರಳದಲ್ಲಿ ಪಕ್ಷ ಸಂಘಟನೆಯಲ್ಲಿ ಹಾಗೂ ಅಭಿವೃದ್ಧ ಗಾಗಿ ಶ್ರಮಿಸಿದ ನಳಿನ್ ಕುಮಾರ್ ಕಟೀಲು ಈ ಬಾರಿ ಕಳೆದ ಬಾರಿಯ ಫಲಿತಾಂಶದ ಅಂತರಕ್ಕಿಂತಲೂ ಅಧಿಕ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಧಾನಿಯಾಗಲು ಮೋದಿಯವರಿಗೆ ಮಾತ್ರ ಅರ್ಹತೆ ಇದ್ದು ಈ ನಿಟ್ಟಿನಲ್ಲಿ ಪಕ್ಷ ನೋಡದೆ ರಾಷ್ಟ್ರೀಯ ಚಿಂತನೆಗೆ ಮತ ನೀಡುತ್ತಾರೆ.
ಜನ ದೇಶ ನೋಡಿ ದೇಶವನ್ನು ಮುನ್ನಡೆ ಸುವ ಸಮರ್ಥ ಅಭ್ಯರ್ಥಿ ಮೋದಿಯವರನ್ನು ನೋಡಿ ಮತ ನೀಡುತ್ತಾರೆ ಎಂದು ಹರಿಕೃಷ್ಣ ಬಂಟ್ವಾಳ್ ಹೇಳೀದರು.

ಉಳಿದ ಪಕ್ಷದ ನಾಯಕರು ಮೋದಿಯವರನ್ನು ಬೈಯ್ಯುವ ಭಾಷಣ ಬಿಟ್ಟರೆ ದೇಶದ ಹಿತದೃಷ್ಟಿಯಿಂದ ಅಭಿವೃದ್ದಿಯ ಚಿಂತನೆಯಯಾವುದೇ ಹೇಳಿಕೆಗಳು ನೀಡುತ್ತಿಲ್ಲ ಎಂದು ಅವರು ಹೇಳಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾಜಿ ಶಾಸಕ ಕೊಟ್ಟಾರಿ, ಜಿಲ್ಲೆ ಯ ಉಪಾಧ್ಯಕ್ಷ ಜಿ.ಆನಂದ, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್, ಅಪ್ಪಯ್ಯ ಮಣಿಯಾಣಿ, ಕ್ಷೇತ್ರದ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಎಸ್.ಸಿ.ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಕ್ಷೇತ್ರದ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ದಿನೇಶ್ ಭಂಡಾರಿ, ದೇವಪ್ಪ ಪೂಜಾರಿ, ಮಹೇಶ್ , ಚರಣ್ ಉಪಸ್ಥಿತರಿದ್ದರು.

More from the blog

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ ಸಹಯೋಗದೊಂದಿಗೆ ಇಂದು ಶಾಲಾ ಪರಿಸರದಲ್ಲಿ...

Puttur : ನಾಪತ್ತೆಯಾಗಿದ್ದ ಯುವತಿ ಮನೆಗೆ ಬಿಜೆಪಿ ಪ್ರಮುಖರು, ಹಿಂದೂ ಸಂಘಟನೆಯ ಮುಖಂಡರು ಭೇಟಿ..

ಪುತ್ತೂರು: ಪುತ್ತೂರಿನಿಂದ ಇತ್ತೀಚೆಗೆ ನಾಪತ್ತೆಯಾಗಿದ್ದು, ನಂತರ ಬೆಂಗಳೂರಿನಲ್ಲಿ ಪತ್ತೆಯಾದ ಯುವತಿ ರೂಪ ಅವರ ಮನೆಗೆ ಬಿಜೆಪಿ ಪ್ರಮುಖರು ಹಾಗೂ ಹಿಂದೂ ಸಂಘಟನೆಯ ಮುಖಂಡರು ಭೇಟಿ ನೀಡಿದ್ದಾರೆ. ಯುವತಿಯ ಪತ್ತೆಯಾದ ನಂತರ, ಹಿಂದೂ ಸಂಘಟನೆಯ ಮುಖಂಡರು,...

ಬೂಡಾ ಸಹಾಯಕ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ..

ಬಂಟ್ವಾಳ : ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿಯಾಗಿ ಶ್ರೀಮತಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀರಕರಿಸಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಶ್ರೀ ಬೇಬಿ ಕುಂದರ್ ಮತ್ತು ಸಿಬಂಧಿವರ್ಗ ಉಪಸ್ಥಿತರಿದ್ದರು.