Thursday, February 13, 2025

ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಆರ್ಥಿಕ ಸುಧಾರಣೆಯ ನೇತಾರ ಮೋದಿ ಮತ್ತೋಮ್ಮೆ ಪ್ರಧಾನಿಯಾಗಬೇಕು: ನಳಿನ್

ಬಂಟ್ವಾಳ: ಎ.18 ನಡೆಯವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಬಹಿರಂಗ ಸಭೆಯ ಮೂಲಕ ಮತಬೇಟೆಗೆ ಗುರುವಾರ ಚಾಲನೆ ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಲ್ಲಿ ಗುರುವಾರ ಬಹಿರಂಗ ಸಭೆ ಹಾಗೂ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದ್ದಾರೆ.
ಸಂಜೆ ಬಂಟ್ವಾಳ ವಿಧಾನ ಸಭಾ‌ಕ್ಷೇತ್ರದ ಪ್ರಥಮ ಬೂತ್ ಸಂಗಬೆಟ್ಟು ಸಿದ್ದಕಟ್ಟೆಯ ಪೇಟೆಯಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಸುಧಾರಣೆ ಮಾಡುವ ಏಕೈಕ ನಾಯಕ ಅದು ನರೇಂದ್ರ ಮೋದಿ, ಜಗತ್ತು ಭಾರತದ ಕಡೆ ನೋಡುತ್ತಿದೆ. ಜಗತ್ತನ್ನು ಎತ್ತರಕ್ಕೆ ಏರಿಸುವ ಶಕ್ತಿ ನರೇಂದ್ರ ಮೋದಿಗಿದೆ ಹಾಗಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು, ಮೋದಿ ಪ್ರಧಾನಿ ಯಾಗಲು ಕರ್ನಾಟಕದ ಪ್ರತಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಳನ್ನು ಗೆಲ್ಲಿಸಿ ಕಳುಹಿಸುವ ಸಂಕಲ್ಪ ಮಾಡಬೇಕಾಗಿದೆ ಎಂದರು. ‌
ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಆರ್ಥಿಕ ಸುಧಾರಣೆ ಮಾಡಿದ ಜನನಾಯಕ ನರೇಂದ್ರ ಮೋದಿ ಎಂದು ಅವರು ಹೇಳಿದರು.
ಅರಬ್ ದೇಶದಲ್ಲಿ ಗಣಪತಿ ಆರಾಧನೆಗೆ ಅವಕಾಶ ಮಾಡಿಕೊಟ್ಟ ಪ್ರಥಮ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಜಗತ್ತಿನಲ್ಲಿ ಭಾರತದ ಸೈನಿಕ ಶಕ್ತಿಯ ಪರಿಚಯ ನರೇಂದ್ರ ಮೋದಿಯಿಂದ ಆಗಿದೆ.

ಸೈನಿಕರಿಗೆ ಧೈರ್ಯ ನೀಡಿ ವಿರೋಧಿ ಗಳಿಗೆ ತಕ್ಕ ಪಾಠ ಹೇಳುವ ಮೂಲಕ ಜಗತ್ತಿದೆ ಸಂದೇಶ ಕಳಿಸುವ ಕೆಲಸ ನರೇಂದ್ರ ಮೋದಿಯವರಿಂದ ಸಾಧ್ಯವಾಯಿತು.
ಲೋಕಪಾಲ ನೇಮಕದಮೂಲಕ ಅಣ್ಷಾ ಹಜಾರೆಗೆ ನ್ಯಾಯ ಒದಗಿಸುವ ಕೆಲಸ ಆಯಿತು. ಆರೋಗ್ಯ ಭಾಗ್ಯ, ಆಯುಸ್ಮಾನ್, ಸ್ವಚ್ಚಭಾರತ್, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಗ್ಯಾಸ್ ಹೀಗೆ ಐದು ವರ್ಷಗಳ ಲ್ಲಿ 333 ಯೋಜನೆ ಗಳನ್ನು ನೀಡಿದ ಮೊದಲ ಪ್ರಧಾನ ಮಂತ್ರಿ ನರೇಂದ್ರ ಮೋದಿ , ಹಾಗಾಗಿ ಗ್ರಾಮಗಳಿಗೆ ಶಕ್ತಿ ನೀಡಿ ರಾಷ್ಟ್ರ ನಿರ್ಮಾಣದ ಕಾರ್ಯ ಪ್ರಧಾನ ಮಂತ್ರಿ ಮಾಡಿದ್ದಾರೆ ಹಾಗಾಗಿ ನರೇಂದ್ರ ಮೋದಿ ಯವರ ಮೇಲೆ ಜನರಿಗೆ ವಿಶ್ವಾಸ ವಿದೆ ಎಂದು ಅವರು ಹೇಳಿದರು.


16520 ಕೋಟಿ ಹಣ ದ.ಕ.ಜಿಲ್ಲೆಗೆ ಕೇಂದ್ರ ಸರಕಾರ ನೀಡಿದೆ. ಬಿಸಿರೋಡಿನಿಂದ ಮೂಡಬಿದ್ರೆಯವರೆಗೆ ಚತುಷ್ಪತ ರಸ್ತೆ ಕಾಮಗಾರಿ ಮಂಜೂರಾಗಿದೆ.

ಕಳೆದ ಹತ್ತು ವರ್ಷಗಳಲ್ಲಿ ಸಜ್ಜನಿಕೆಯ ಆದರ್ಶದ ರಾಜಕಾರಣ ಮಾಡಿದ್ದೇನೆ, ಜಿಲ್ಲೆಯ ಅಭಿವೃದ್ಧಿ ಗೆ ಶಕ್ತಿಮೀರಿ ಶ್ರಮಿಸಿದ್ದೇನೆ.
ಜಿಲ್ಲೆಯ ಜನರಿಗೆ ಅನ್ಯಾಯ ವಾದಾಗ ಪ್ರತಿ ಬಾರಿ ಹೋರಾಟದ ಮೂಲಕ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇನೆ ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತನೀಡುವಂತೆ ಮನವಿ ಮಾಡಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮಾತನಾಡಿ ಈ ಬಾರಿಯ ಚುನಾವಣೆ ಪ್ರಮುಖವಾಗಿ ದ್ದು ಭವಿಷ್ಯವನ್ನು ಬರೆಯುವ ಚುನಾವಣೆ ಹಾಗಾಗಿ ಸೂಕ್ತ ವಾದ ಅಭ್ಯರ್ಥಿ ನಳಿನ್ ಕುಮಾರ್ ಅವರನ್ನು ಗೆಲ್ಲಿಸಲು ಮನವಿ ಮಾಡಿದರು.
ವಿದೇಶದಲ್ಲೂ ಗೌರವಯುತವಾಗಿ ಭಾರತೀಯ ರು ಉದ್ಯೋಗ ದಲ್ಲಿ ರಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕಾರಣ ಎಂದರು.
ದೇಶದ ಭದ್ರತೆಯ ಮೇಲೆ ವಿಶೇಷ ಕಾಳಜಿ ವಹಿಸಿದ್ದಾರೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಪ್ರಮುಖರಾದ ದೇವದಾಸ್ ಶೆಟ್ಟಿ, ಹರಿಕ್ರಷ್ಣ ಬಂಟ್ವಾಳ, ಎ.ರುಕ್ಮಯ ಪೂಜಾರಿ, ಪ್ರಭಾಕರ ಪ್ರಭು,ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ರವಿಶಂಕರ್ ಮಿಜಾರ್, ಕೆ.ರತ್ನಕುಮಾರ್ ಚೌಟ, ಸತೀಶ್ ಪೂಜಾರಿ ಅಳಕೆ, ಜಿ.ಆನಂದ, ದಿನೇಶ್ ಅಮ್ಟೂರು, ಜಿತೇಂದ್ರ ಕೊಟ್ಟಾರಿ, ಗುಲಾಬಿ ಶೆಟ್ಟಿ, ಯಶೋದ, ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...