Thursday, June 26, 2025

ಬಿಜೆಪಿಯ 5ನೇ ಪಟ್ಟಿ ರಿಲೀಸ್ : ಶೆಟ್ಟರ್ ಗೆ ಟಿಕೆಟ್: ಅನಂತ್ ಕುಮಾರ್ ಹೆಗಡೆಗೆ ಕೊಕ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು , ಅಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.

ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ಎಸ್ ಟಿ ಮೀಸಲು ಕ್ಷೇತ್ರದಲ್ಲಿ ರಾಜ ಅಮರೇಶ್ವರ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಪ್ರತಿನಿಧಿಸುತ್ತಿರುವ ಚಿತ್ರದುರ್ಗ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿ ಇನ್ನಷ್ಟೇ ಘೋಷಿಸಬೇಕಿದೆ. ಬಿಜೆಪಿ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮಿತ್ರ ಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...