Tuesday, February 11, 2025

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಪರಾರಿ: ಯುವಮೋರ್ಚಾ ಖಂಡನೆ

ಬಂಟ್ವಾಳ : ಬಂಟ್ವಾಳ ತಾಲೂಕು ಮಾಣಿಯಲ್ಲಿ ಕಳೆದ 9 ದಿನಗಳ ಹಿಂದೆ ನಡೆದ 8 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಸರಕಾರ ಮತ್ತು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸದೆ ಆರೋಪಿ ಪರಾರಿಯಾಗಲು ಸಹಕರಿಸಿರುವುದನ್ನು ಬಂಟ್ವಾಳ ಬಿಜೆಪಿ ಯುವಮೋರ್ಚಾವು ತೀವ್ರವಾಗಿ ಖಂಡಿಸುತ್ತದೆ. ಪ್ರಕರಣ ನಡೆದು ಇಷ್ಟು ದಿನಗಳದರೂ ಕೂಡ ಪೋಲಿಸ್ ಇಲಾಖೆ ಆರೋಪಿಗಳನ್ನು ಬಂದಿಸದೆ ಇರುವುದರಿಂದ ಇಲಾಖೆ ಮೇಲಿರುವ ವಿಶ್ವಾಸ ಕಳೆದುಕೊಲ್ಲುವಂತೆ ಆಗಿರುವುದಲ್ಲದೆ ಆರೋಪಿಯ ಸಹವರ್ತಿಗಳು ಬಾಲಕಿಯ ಹೆತ್ತವರಿಗೆ ಬೆದರಿಕೆ ಮತ್ತು ಆಮೀಷಗಳನ್ನು ಒಡ್ಡುವಂತೆ ಆಗಿದೆ. ಈ ಬಗ್ಗೆಯೂ ಇಲಾಖೆ ಸೂಕ್ತ ತನಿಖೆ ನಡೆಸಿ ಆಮೀಷ ಮತ್ತು ಬೆದರಿಕೆ ಒಡ್ಡಿದವರನ್ನು ಪೋಸ್ಕೋ ಕಾಯ್ದೆಯಡಿ ತನಿಖೆಗೊಳಪಡಿಸಿ ಬಂದಿಸಬೇಕಾಗಿ ಯುವಮೋರ್ಚಾವು ಆಗ್ರಹಿಸುತ್ತದೆ. ನಮ್ಮ ತಾಳ್ಮೆ ದೌರ್ಬಲ್ಯವಲ್ಲ ಅದು ನ್ಯಾಯ ಪಡೆದುಕೊಳ್ಳಲು ನೀಡಿರುವ ಅವಕಾಶ ನ್ಯಾಯ ನೀಡದಿದ್ದರೆ ಪಡೆದುಕೊಳ್ಳುವುದು ಅನಿವಾರ್ಯ ಆಗ್ತದೆ.  ಪೋಲೀಸ್ ಇಲಾಖೆ ಕೋಮು ಸೂಕ್ಷ್ಮ ಪ್ರದೇಶವಾದ ಬಂಟ್ವಾಳ ತಾಲೂಕಿನಲ್ಲಿ ಈ ರೀತಿಯ ಪ್ರಕರಣವನ್ನು ಅತೀ ಜರೂರು ಎಂದು ಪರಿಗಣಿಸಿ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಮತ್ತು ಸಹಕರಿಸಿದವರನ್ನು ಎರಡು ದಿವಸಗಳಲ್ಲಿ ಬಂದಿಸಿ ಮುಗ್ದ ಬಾಲಕಿಗೆ ನ್ಯಾಯ ಒದಗಿಸಬೇಕಾಗಿ ಬಂಟ್ವಾಳ ಬಿಜೆಪಿ ಯುವಮೋರ್ಚಾವು ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತವನ್ನು ಆಗ್ರಹಿಸುತ್ತದೆ.

More from the blog

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...