Wednesday, June 25, 2025

ಝಮಾನ್ ಬೊಯ್ಸ್ ಕಲ್ಲಡ್ಕ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಕಲ್ಲಡ್ಕದಲ್ಲಿ ರಕ್ತದಾನ ಶಿಬಿರ

ವಿಟ್ಲ : ಝಮಾನ್ ಬೊಯ್ಸ್ ಕಲ್ಲಡ್ಕ, ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಪಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ ಇದರ ಸಹಬಾಗಿತ್ವದಲ್ಲಿ ರಕ್ತದಾನ ಶಿಬಿರ ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆದಿತ್ಯವಾರ ನಡೆಯಿತು.
ಕಾರ್ಯಕ್ರಮವನ್ನು ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಉದ್ಘಾಟಿಸಿದರು.ಅಧ್ಯಕ್ಷತೆ ವಹಿಸಿಕೊಂಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಿದ್ದೀಕ್ ಪನಾಮ ಮಾತನಾಡಿ ದಾರಿ ತಪ್ಪುತ್ತಿರುವ ಯುವ ಸಮೂಹದ ಮಧ್ಯೆ ಇಂತಹ ಯುವ ಮನಸ್ಸುಗಳು ಸಮಾಜ ಸೇವೆಗಾಗಿ ಮಿಡಿದದ್ದು ಪ್ರಶಂಶನೀಯ , ಭವಿಷ್ಯದ ಮಾದರಿ ಯುವಕರಾಗುವುದರೊಂದಿಗೆ ಕೇವಲ ಕ್ರೀಡಾ ಚಟುವಟಿಕೆ ಮಾತ್ರವಲ್ಲದೆ ಇಂತಹ ಮಹೋನ್ನತ ಕಾರ್ಯವನ್ನು ಸಂಘಟಿಸಿರುವ ಝಮಾನ್ ಬೊಯ್ಸ್ ನ ತಮ್ಮ ಸಮಾಜಮುಖಿ ಚಿಂತನೆಯನ್ನು ಜನತೆಗೆ ತೋರಿಸಿಕೊಟ್ಟಿದ್ದಾರೆ ಎಂದರು.

ಬ್ಲಡ್ ಡೋನರ್ಸ್ ಮಂಗಳೂರು ಅಧ್ಯಕ್ಷ ಸಿದ್ದೀಕ್ ಮಂಜೇಶ್ವರ ಮಾತನಾಡಿ ನಮ್ಮ ಸಂಸ್ಥೆ ಕಳೆದ 5 ವರ್ಷಗಳಿಂದ 178ಕ್ಕೂ ಅಧಿಕ ಶಿಬಿರಗಳನ್ನು ಆಯೋಜಿಸಿಕೊಂಡು 15,000ಕ್ಕಿಂತಲೂ ಮಿಗಿಲಾಗಿ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ರಕ್ತ ಪೂರೈಸಿದ್ದೇವೆ ಎಂದರು.
ದ.ಕ ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಅದ್ಯಕ್ಷ ಲತೀಫ್ ನೇರಳಕಟ್ಟೆ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ವೈಜ್ಞಾನಿಕ ಸಂಶೋಧನೆಗಳಿಂದ ಎಲ್ಲವನ್ನೂ ಮಾಡಲು ಸಾದ್ಯವಾಗಿದ್ದರೂ ರಕ್ತ ಮಾತ್ರ ಇನ್ನೋರ್ವ ದಾನಿಯಿಂದಲೇ ಪಡೆಯಬೇಕಾಗಿದೆ, ಜಾತಿ ಧರ್ಮಗಳ ಭೇದಭಾವವಿಲ್ಲದೆ ಜೀವಕ್ಕೆ ಮರುಜೀವ ನೀಡಲು ಸಹಕಾರಿಯಾಗುವ ಶಕ್ತಿ ರಕ್ತದಾನಿಗಳಿಗಿದೆ ಎಂದರು.
ಉದ್ಯಮಿಗಳಾದ ದಯಾನಂದ ಆಚಾರ್ಯ ಸೌದಿ ಅರೇಬಿಯಾ, ಸಮಾಜ ಸೇವಕರಾದ ಹಕೀಂ ಕಲ್ಲಡ್ಕ, ಡಿ.ಕೆ.ಅಝ್ಮಲ್ ಕಾಂತಡ್ಕ, ಸಿದ್ದೀಕ್ ಜಿ.ಎಸ್, ಐ ಎನ್ ಶಾಪಿ ಕಲ್ಲಡ್ಕ, ಜಾಫರ್ ಕಲ್ಲಡ್ಕ, ಕಾಸಿಂ ಕಲ್ಲಡ್ಕ, ಝಮಾನ್ ಬಾಯ್ಸ್ ಗೌರವಾಧ್ಯಕ್ಷ ರಹಿಮಾನ್ ಕೆ.ಸಿ. ರೋಡ್, ಹಜಾಜ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಇಮ್ತಿಯಾಝ್ ಗೋಳ್ತಮಜಲು, ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.
ಈ ಯಶಸ್ವೀ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ 133 ಮಂದಿ ರಕ್ತದಾನಗೈದರು. ಬ್ಲಡ್ ಡೋನರ್ಸ್ ಮಂಗಳೂರು ತಂಡದ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಅಶ್ರಫ್ ಉಪ್ಪಿನಂಗಡಿ, ಮಾಸ್ಟರ್ ಮಹಮ್ಮದ್ ಫಾಝಿಲ್ ಉಪಸ್ಥಿತರಿದ್ದರು.

ಸನ್ಮಾನ
ಇದೇ ಸಂದರ್ಭದಲ್ಲಿ ಸಮಾಜ ಸೇವಕರಾದ ಬ್ಲಡ್ ಡೋನರ್ಸ್ ಮಂಗಳೂರು ತಂಡದ ಕಾರ್ಯ ನಿರ್ವಾಹಕ ಫಾರೂಕ್ ಬಿಗ್ ಗ್ಯಾರೇಜ್ ಹಾಗೂ ಲತೀಫ್ ಉಪ್ಪಿನಂಗಡಿ ಅವರನ್ನು ಸನ್ಮಾನಿಸಲಾಯಿತು.
ಝಮಾನ್ ಬೊಯ್ಸ್ ಅಧ್ಯಕ್ಷ ಮನ್ಸೂರ್ ಕಲ್ಲಡ್ಕ ಸ್ವಾಗತಿಸಿ , ನಝೀಮುದ್ದೀನ್ (ನಜಿಮಿ) ವಂದಿಸಿದರು. ಬ್ಲಡ್ ಡೋನರ್ಸ್ ಮಂಗಳೂರು ಕಾರ್ಯ ನಿರ್ವಾಹಕ ರಝಾಕ್ ಸಾಲ್ಮರ ಕಾರ್ಯಕ್ರಮ ನಿರೂಪಿಸಿದರು.

*ರಕ್ತದಾನ ಮಾಡಿದ ಸೆವೆನ್ ಬ್ರದರ್ಸ್*

ಅಂಡರ್ ಆರ್ಮ್ ಕ್ರಿಕೆಟ್ ಪಟುಗಳು,ಕಲ್ಲಡ್ಕ ನಿವಾಸಿಗಳು, ಒಡಹುಟ್ಟಿದ ಸಹೋದರರುಗಳಾದ ರಶೀದ್ ಬಾಬ, ಹೈದರ್, ಇಕ್ಬಾಲ್, ರಿಯಾಝ್, ಮುನಾಝ್, ನವಾಝ್, ಹಾಗೂ ಜುನೈದ್ ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಗಮನ ಸೆಳೆದರು.

More from the blog

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...