Friday, January 30, 2026

ಬಂಟ್ವಾಳ ಬಿಜೆಪಿ ಚುನಾವಣಾ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಸಂತೋಷ್ ಜಿ. ಭೇಟಿ

ಬಂಟ್ವಾಳ ಬಿಜೆಪಿ ಚುನಾವಣಾ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಸಂತೋಷ್ ಜಿ. ಅವರು ಎ.16 ರಂದು ಬೇಟಿ ನೀಡಿದರು.

ಕಚೇರಿಗೆ ಆಗಮಿಸುತ್ತಿದ್ದಂತೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯವೈಖರಿಯನ್ನು ಮೆಚ್ಚಿ ಬಂಟ್ವಾಳ ಶಾಸಕ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರಿಗೆ ಶುಭಹಾರೈಸಿದರು. ಅ ಬಳಿಕ ಸುಮಾರು ಅರ್ಧ ತಾಸುಗಳ ಕಾಲ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಅದಕ್ಕೂ ಮುನ್ನ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ತಯಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ, ಬಂಟ್ವಾಳ ಕ್ಷೇತ್ರ ಸಮಿತಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು,ಪ್ರಕಾಶ್ ಅಂಚನ್, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಸೀತಾರಾಮ ಪೂಜಾರಿ, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ,ಸುರೇಶ್ ಕೋಟ್ಯಾನ್, ಮನೋಜ್ ಜಾರಂದಗುಡ್ಡೆ,ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಅಭಿಷೇಕ್ ಸರಪಾಡಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...