Friday, January 30, 2026

ಬೋಳ್ನಾಡು ಭಗವತಿ ಕ್ಷೇತ್ರದಲ್ಲಿ ಭೂಮಿಪೂಜೆ, ಶಿಲಾನ್ಯಾಸ

ವಿಟ್ಲ: ತೀಯಾ ಸಮಾಜದ ಇತಿಹಾಸ ಪ್ರಸಿದ್ದ 18 ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಭಗವತೀ ಕ್ಷೇತ್ರದ ಭಂಡಾರ ಕ್ಷೇತ್ರದ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ತಂತ್ರಿವರ್ಯರಾದ ಉಳಿಯತ್ತಾಯ ವಿಷ್ಣು ಆಸ್ರ ಅವರ ಮಾರ್ಗದರ್ಶನದಲ್ಲಿ ಬುಧವಾರ ನಡೆಯಿತು.
ಕ್ಷೇತ್ರದ ಶಿಲ್ಪಿವರ್ಯರಾದ ರಮೇಶ್ ಕಾರಂತ ಬೆದ್ರಡ್ಕ ನೇತೃತ್ವದಲ್ಲಿ ಕ್ಷೇತ್ರ ನಿರ್ಮಾಣದ ರೂವಾರಿ ಕೃಷ್ಣ ಎನ್. ಉಚ್ಚಿಲ ಅವರು ಶಿಲಾನ್ಯಾಸ ನಡೆಸಿದರು. ಕೊಡಿಮರ ಮೆರವಣಿಗೆ ಸಂದರ್ಭ ಅಗತ್ಯ ವ್ಯವಸ್ಥೆಗಳನ್ನು ಮಾಡಿದ ವಿಟ್ಲ ಉಪ ವಲಯ ಅರಣ್ಯಾಧಿಕಾರಿ ಸೀತಾರಾಮ ಕೆ., ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ, ವಿವಿಧ ಸಂಘಟನೆಯ ಮುಖಂಡರು, ಸಹಕರಿಸಿದ ಗಣ್ಯರನ್ನು ಗೌರವಿಸಲಾಯಿತು.
ಅಳಿಕೆ ಶ್ರೀಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಕಾರ್ಯದರ್ಶಿ ಚಂದ್ರಶೇಖರ ಭಟ್, ಮುಂಬಯಿ ತೀಯಾ ಸಮಾಜದ ಅಧ್ಯಕ್ಷರಾದ ರವಿ ಮಂಜೇಶ್ವರ, ಕಣ್ಣಕಲೆಕಾರ ಗೋಪಾಲದಾಸ್ ಕಲೆಕಾರ್, ಉಪ್ಪಳ ಕ್ಷೇತ್ರದ ಆಚಾರ ಪಟ್ಟವರು ಮತ್ತು ಗುರಿಕಾರರು, ಸೇವಾ ಸಮಿತಿಯ, ನಿರ್ಮಾಣ ಸಮಿತಿಯ, ಯುವಜನ ಸಂಘ, ಮಹಿಳಾ ಸಂಘ, ಭಜನಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಕಣಿಲ ಶ್ರೀ ಭಗವತೀ ಕ್ಷೇತ್ರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...