Monday, January 26, 2026

ಬೊಂಡಾಲ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಶಿಲಾನ್ಯಾಸ

ಬಂಟ್ವಾಳ: ಶ್ರೀ ಮಹಾಗಣಪತಿ ದೇವಸ್ಥಾನ ಬೊಂಡಾಲ ಇಲ್ಲಿ ಶ್ರೀ ಮಹಾಗಣಪತಿ ದೇವರ ಗರ್ಭ ಗುಡಿಗೆ ಶಿಲಾನ್ಯಾಸ ಸಮಾರಂಭ ಮೇ 13ರಂದು ಬೆಳಿಗ್ಗೆ ವೇದಮೂರ್ತಿ ಶ್ರೀ ಈಶ್ವರ ಭಟ್ ಮಾದಕಟ್ಟೆ ಇವರಿಂದ ಭೂಮಿಪೂಜೆ ನಡೆದು. ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ವಜ್ರದೇಹಿ ಕ್ಷೇತ್ರ ಗುರುಪುರ ಇವರ ಮಾರ್ಗದರ್ಶನದಲ್ಲಿ ಡಾ| ಪ್ರಭಾಕರ ಭಟ್ ಕಲ್ಲಡ್ಕ ಶಿಲಾನ್ಯಾಸ ಸಮಾರಂಭ ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಶ್ರೀ ಭಯಂಕೇಶ್ವರ ದೇವಸ್ಥಾನ ನರಿಕೊಂಬುವಿನ ಆಡಳಿತ ಮುಕ್ತೇಸರರಾದ ಗಣೇಶ ಸೋಮಯಾಜಿ, ಶ್ರೀ ಸೋಮನಾಥೇಶ್ವರ ದೇವಸ್ಥಾನ ಕುಂಡಾವುವಿನ ಆಡಳಿತ ಮುಕ್ತೇಸರರಾದ ಶಾಂತಾರಾಮ ಶೆಟ್ಟಿ ಬೋಳಂತೂರು, ಷಣ್ಮುಗ ಸುಬ್ರಮಣ್ಯ ದೇವಸ್ಥಾನ ಮುಗುಳಿಯ ಆಡಳಿತ ಮುಕ್ತೇಸರರಾದ ಜಯಶಂಕರ ಬಾಸ್ರೀತ್ತಾಯ, ಮಂಗಳಾ ಇಲೆಕ್ಟ್ರಿಕಲ್ಸ್ ಗಂಜಿಮಠ ಮಂಗಳೂರು ಉದ್ಯಮಿ ಭಾಸ್ಕರ ಭಟ್ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಉಪಾಧ್ಯಕ್ಷರಾದ ರಘು ಸಫಲ್ಯ, ಕಾರ್ಯದರ್ಶಿಗಳಾದ ಬೊಂಡಾಲ ಜನಾರ್ದನ ಕುಲಾಲ್, ಬೊಂಡಾಲ ವಿನೋದ್ ಶೆಟ್ಟಿ, ವಸಂತ ಅಂಚನ್, ಪ್ರವೀಣ್ ಕುಮಾರ್, ವಸಂತ್ ಕುಲಾಲ್, ನಾರಾಯಣ ಬಂಗೇರ, ಆತ್ಮರಂಜನ್ ಶೆಟ್ಟಿ ಉಪಾಧ್ಯಕ್ಷರಾದ ನಾಗೇಶ್ ಆಕ್ರುತಿ ಕಲ್ಲಡ್ಕ, ಹಾಗೂ ಊರ ಭಕ್ತಾದಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜಯರಾಮ ಹೊಳ್ಳ ನಾಗ್ತೀಮಾರ್ ಅತಿಥಿಗಳನ್ನು ಸ್ವಾಗತಿಸಿದರು.  ಜೊತೆ ಕೋಶಾಧಿಕಾರಿ ಪ್ರೇಮ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...