Tuesday, January 27, 2026

ಬೊರಿಮಾರ್ ಕೆಥೋಲಿಕ್ ಸಭಾದ ನೂತನ ಅಧ್ಯಕ್ಷರಾಗಿ ಅಪೋಲಿನ್ ಪಿಂಟೋ

ಬಂಟ್ವಾಳ: ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೊರಿಮಾರ್ ಚರ್ಚ್ ನಲ್ಲಿ ಪುನರ್ ಸ್ಥಾಪನೆಯಾಗಿರುವ
ಕೆಥೋಲಿಕ್ ಸಭಾ ದ ನೂತನ ಅಧ್ಯಕ್ಷರಾಗಿ ಅಪೋಲಿನ್ ಪಿಂಟೋ ಆಯ್ಕೆಯಾಗಿದ್ದಾರೆ.
ಭಾನುವಾರ ಚರ್ಚಿನಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಅಲೆಕ್ಸ್ ಮೋರಸ್, ಕಾರ್ಯದರ್ಶಿಯಾಗಿ ಗ್ರೆಟ್ಟಾ ಲಸ್ರಾದೋ, ಸಹಕಾರ್ಯದರ್ಶಿಯಾಗಿ ಅನಿತಾ ಮಾರ್ಟಿಸ್, ಖಜಾಂಚಿಯಾಗಿ ಪಿಯಾದ್ ವೇಗಸ್, ಆಯ್ಕೆಯಾದರು.


ಅಧ್ಯಕ್ಷ, ಸಹಿತ ಎಲ್ಲಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯನ್ನು ಸ್ಥಾಪಕ ಅಧ್ಯಕ್ಷ ರೋಶನ್ ಬೊನಿಫಾಸ್ ಮಾರ್ಟಿಸ್, ಬೊರಿಮಾರ್ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ, ಮಂಗಳೂರು ಕೆಥೋಲಿಕ್ ಸಭಾದ ಅಧ್ಯಕ್ಷರಾದ ರಾಲ್ಫ್ ಡಿ ಕೋಸ್ತ, ಮೊಗರ್ನಾಡು ವಲಯ ಕೆಥೋಲಿಕ್ ಸಭಾದ ಅಧ್ಯಕ್ಷ ಆ್ಯಂಟನಿ ಡಿ’ಸೋಜ ಚುನಾವಣಾ ವೀಕ್ಷಕರಾಗಿ ಭಾಗವಹಿಸಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಉಳಿದಂತೆ ಸಂದೇಶ ಪ್ರತಿನಿಧಿಯಾಗಿ ಮೇರಿ ಡಿ’ಸೋಜ, ಸ್ತ್ರೀ ಸಂಚಾಲಕಿಯಾಗಿ ಪ್ರಿಯಾ ಪಿಂಟೋ, ರಾಜಕೀಯ ಸಂಚಾಲಕರಾಗಿ ಲಾರೆನ್ಸ್ ಪಿಂಟೋ, ಸಮುದಾಯ ಅಭಿವೃದ್ಧಿ ಸಂಚಾಲಕರಾಗಿ ಐವನ್ ಮಾರ್ಟಿಸ್ ಆಯ್ಕೆಯಾದರು.
ಆಯ್ಕೆ ಪ್ರಕ್ರಿಯೆ ಬಳಿಕ ನೂತನ ಪದಾಧಿಕಾರಿಗಳನ್ನು ಬೊರಿಮಾರ್ ಚರ್ಚ್ ಹಾಗೂ ಪಾಲನಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...