Thursday, February 13, 2025

ಬೊರಿಮಾರ್ ಚರ್ಚ್ ನಲ್ಲಿ ಶಾಲೋತ್ಸವ ಆಚರಣೆ

ಬಂಟ್ವಾಳ: ಬೊರಿಮಾರ್ ಚರ್ಚ್ ನ ಶತಮಾನೋತ್ತರ ಬೆಳ್ಳಿ ಹಬ್ಬದ ಆಚರಣೆಯು ಎಲ್ಲಾ ಧರ್ಮಿಯರಿಗೂ ಮಾದರಿ ಎಂಬಂತೆ ಮುನ್ನಡೆಯುತ್ತಿದ್ದು, ಭಗವಂತನಿಗೂ ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವಮಾವೆ ಹೇಳಿದರು. ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬೊರಿಮಾರ್ ನ ಸೈಂಟ್ ಜೋಸೆಫ್ ಚರ್ಚ್‌ನ ಆಶ್ರಯದಲ್ಲಿ ಮುನ್ನಡೆಯುತ್ತಿರುವ ಸೈಂಟ್ ಜೋಸೆಫ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ “ಶಾಲೋತ್ಸವ” ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೊರಿಮಾರ್ ಚರ್ಚಿನ ಪಾಲನಾ ಸಮಿತಿಯವರು ಪ್ರತೀ ತಿಂಗಳು ಹಮ್ಮಿಕೊಂಡಂತಹ ಕಾರ್ಯಕ್ರಮಗಳು ರಾಜಕೀಯದಲ್ಲಿ ಸೇವೆ ನೀಡುತ್ತಿರುವ ನಮಗೆ ಮಾದರಿಯಾಗಿದೆ ಎಂದ ಅವರು, ಫಾದರ್ ಗ್ರೆಗರಿ ಪಿರೇರಾ ರವರ ಕೃಷಿ ಕ್ರಾಂತಿ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರ ಪರಿಕಲ್ಪನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಸಾಮಾಜಿಕ ಸಾಮರಸ್ಯ ಸಾರುವ ಕ್ರಿಸ್ಮಸ್ ಸೌಹಾರ್ದಕೂಟ ಸೂರಿಕುಮೇರು ಚರ್ಚ್ ನ ಹೆಸರನ್ನು ಉತ್ತುಂಗಕ್ಕೆ ಏರಿಸಿದೆ ಎಂದವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾದರ್ ಗ್ರೆಗರಿ ಪಿರೇರಾ ವಹಿಸಿದ್ದರು. ಮಕ್ಕಳು ಶಿಕ್ಷಣದ ಕಡೆಗೆ ಹೆಚ್ಚು ಗಮನ ನೀಡುವುದರ ಮೂಲಕ ಹೆತ್ತವರ ಕನಸನ್ನು ನನಸು ಮಾಡಬೇಕು, ಇದು ದೇವರಿಗೂ ಪ್ರೀತಿ ಎಂದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ ಭಾಗವಹಿಸಿದ್ದರು.
ಜೀವನ್ ನಿಲಯ ಕಾನ್ವೆಂಟಿನ ಸುಪೀರಿಯರ್ ಸಿಸ್ಟರ್ ನ್ಯಾನ್ಸಿ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್, ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ, ಮುಖ್ಯ ಶಿಕ್ಷಕಿ ತೆರೆಜಾ ಫೆರ್ನಾಂಡಿಸ್ ಮತ್ತು ರೀನಾ ಡಿ’ಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ನಡೆದ ಶಾಲೋತ್ಸವ ಕಾರ್ಯಕ್ರಮ ನೆನಪಿಗಾಗಿ ಎರಡೂ ಶಾಲೆಗಳ ಶಿಕ್ಷಕರಿಗೆ , ಸಿಬ್ಬಂದಿಗಳಿಗೆ ಚರ್ಚ್ ಪಾಲನಾ ಸಮಿತಿಯ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಅಪಘಾತದಲ್ಲಿ ಗಾಯಾಳುವಾದ ವಿದ್ಯಾರ್ಥಿಗಳಿಗೆ ತುರ್ತು ಚಿಕಿತ್ಸೆ ನೀಡಿದ ಪೋಸ್ಟ್ ಮ್ಯಾನ್ ಅಶ್ರಫ್ ಸೂರಿಕುಮೇರು ಮತ್ತು ಇಲೆಕ್ಟ್ರಿ್ಶಿಯನ್ ಚಿದಾನಂದರವರನ್ನು ಸನ್ಮಾನಿಸಲಾಯಿತು.
ಶಿಕ್ಷಕಿ ಜೆಸಿಂತಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...