Saturday, July 12, 2025

ಬೊರಿಮಾರ್ ಚರ್ಚ್ ನಲ್ಲಿ ವಿಶೇಷ ಧ್ಯಾನ ಕೂಟ

ಬಂಟ್ವಾಳ: ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣಾ ಹೊಸ್ತಿಲಲ್ಲಿರುವ ಸಂತ ಜೋಸೆಫರ ದೇವಾಲಯ ಬೊರಿಮಾರ್ ನಲ್ಲಿ ಪ್ರಾಯಶ್ಚಿತ ಕಾಲದ ವಿಶೇಷ ಧ್ಯಾನ ಕೂಟವನ್ನು ಮಾರ್ಚ್ 20 ರಿಂದ 24 ರ ತನಕ ಏರ್ಪಡಿಸಲಾಗಿತ್ತು. ವಿಶೇಷ ಧ್ಯಾನ ಕೂಟದ ಪ್ರಸ್ತುತಿ ಮತ್ತು ಪ್ರಸಂಗದಾರರಾಗಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಿಷಪರು ಆದ ಅತೀ ವಂದನೀಯ ಡಾ| ಲಾರೆನ್ಸ್ ಮುಕ್ಕುಝಿಯವರು ಆಗಮಿಸಿದ್ದರು.

ಕಳೆದ ಐದು ದಿವಸಗಳಲ್ಲಿ ನೂರಾರು ಭಕ್ತಾದಿಗಳು ಪ್ರಾರ್ಥನಾ ಕೂಟದಲ್ಲಿ ಭಾಗವಹಿಸಿದ್ದರು. ಪ್ರಾಯಶ್ಚಿತ ಕಾಲದಲ್ಲಿ ಇಂತಹ ಧ್ಯಾನ ಕೂಟವನ್ನು ಏರ್ಪಡಿಸಿದ ಪಾಲನಾ ಸಮಿತಿಯವರಿಗೆ ಧರ್ಮಾಧ್ಯಕ್ಷರು ಅಬಿನಂದಿಸಿದರು. ಬಿಷಪರನ್ನು ಪಾಲನಾ ಸಮಿತಿಯ ಪರವಾಗಿ ಚರ್ಚ್ ಧರ್ಮ ಗುರು ವಂದನೀಯ ಗ್ರೆಗರಿ ಪಿರೇರಾ ರವರು ಶಾಲು ಮತ್ತು ಹಣ್ಣು ಹಂಪಲುಗಳನ್ನು ನೀಡಿ ಸನ್ಮಾನಿಸಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರವರು ಗೌರವ ಸನ್ಮಾನ ಪತ್ರ ಓದಿ ಹಸ್ತಾಂತರಿಸಿದರು. ಬೆಂಗಳೂರಿನಿಂದ ಆಗಮಿಸಿ ಬ್ರದರ್ ಆಂಟನಿ ರಾಜ್ ಮತ್ತು ತಂಡದವರು ಗೀತೆಗಳನ್ನು ಹಾಡಿದರು. ನೆರೆದ ಎಲ್ಲಾ ಭಕ್ತಾಧಿಗಳಿಗೆ ಭೊಜನದ ವ್ಯವಸ್ಥೆ ಮಾಡಲಾಗಿತ್ತು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...