Thursday, February 13, 2025

ಬೊರಿಮಾರ್ ಚರ್ಚ್ ನಲ್ಲಿ ವಿಶೇಷ ಧ್ಯಾನ ಕೂಟ

ಬಂಟ್ವಾಳ: ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣಾ ಹೊಸ್ತಿಲಲ್ಲಿರುವ ಸಂತ ಜೋಸೆಫರ ದೇವಾಲಯ ಬೊರಿಮಾರ್ ನಲ್ಲಿ ಪ್ರಾಯಶ್ಚಿತ ಕಾಲದ ವಿಶೇಷ ಧ್ಯಾನ ಕೂಟವನ್ನು ಮಾರ್ಚ್ 20 ರಿಂದ 24 ರ ತನಕ ಏರ್ಪಡಿಸಲಾಗಿತ್ತು. ವಿಶೇಷ ಧ್ಯಾನ ಕೂಟದ ಪ್ರಸ್ತುತಿ ಮತ್ತು ಪ್ರಸಂಗದಾರರಾಗಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಿಷಪರು ಆದ ಅತೀ ವಂದನೀಯ ಡಾ| ಲಾರೆನ್ಸ್ ಮುಕ್ಕುಝಿಯವರು ಆಗಮಿಸಿದ್ದರು.

ಕಳೆದ ಐದು ದಿವಸಗಳಲ್ಲಿ ನೂರಾರು ಭಕ್ತಾದಿಗಳು ಪ್ರಾರ್ಥನಾ ಕೂಟದಲ್ಲಿ ಭಾಗವಹಿಸಿದ್ದರು. ಪ್ರಾಯಶ್ಚಿತ ಕಾಲದಲ್ಲಿ ಇಂತಹ ಧ್ಯಾನ ಕೂಟವನ್ನು ಏರ್ಪಡಿಸಿದ ಪಾಲನಾ ಸಮಿತಿಯವರಿಗೆ ಧರ್ಮಾಧ್ಯಕ್ಷರು ಅಬಿನಂದಿಸಿದರು. ಬಿಷಪರನ್ನು ಪಾಲನಾ ಸಮಿತಿಯ ಪರವಾಗಿ ಚರ್ಚ್ ಧರ್ಮ ಗುರು ವಂದನೀಯ ಗ್ರೆಗರಿ ಪಿರೇರಾ ರವರು ಶಾಲು ಮತ್ತು ಹಣ್ಣು ಹಂಪಲುಗಳನ್ನು ನೀಡಿ ಸನ್ಮಾನಿಸಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರವರು ಗೌರವ ಸನ್ಮಾನ ಪತ್ರ ಓದಿ ಹಸ್ತಾಂತರಿಸಿದರು. ಬೆಂಗಳೂರಿನಿಂದ ಆಗಮಿಸಿ ಬ್ರದರ್ ಆಂಟನಿ ರಾಜ್ ಮತ್ತು ತಂಡದವರು ಗೀತೆಗಳನ್ನು ಹಾಡಿದರು. ನೆರೆದ ಎಲ್ಲಾ ಭಕ್ತಾಧಿಗಳಿಗೆ ಭೊಜನದ ವ್ಯವಸ್ಥೆ ಮಾಡಲಾಗಿತ್ತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...