Monday, January 26, 2026

ಎ.25-26: ಪುಣಚ ಬಡೆಕನಡ್ಕ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ

ವಿಟ್ಲ: ಪುಣಚ ಗ್ರಾಮದ ಮಣಿಲ ಬಡೆಕನಡ್ಕ ಶ್ರೀ ರಕ್ತೇಶ್ವರಿ, ಪಂಜುರ್ಲಿ, ಗುಳಿಗ ಹಾಗೂ ಭೈರವ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವ ಎ.25 ಮತ್ತು 26 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್‍ಯಧ್ಯಕ್ಷ ಮಣಿಲ ವಿಠಲ ಶಾಸ್ತ್ರಿ ತಿಳಿಸಿದರು.
ಅವರು ಬುಧವಾರ ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್‍ಯಕ್ರಮಗಳ ವಿವರ ನೀಡಿದರು. ಹಲವಾರು ವರ್ಷಗಳ ಹಿಂದಿನಿಂದ ಆರಾಧನೆಗೊಳ್ಳುತ್ತಿದ್ದ ಸಾನ್ನಿಧ್ಯ ಇತ್ತೀಚಿನ ವರ್ಷ ಜೀರ್ಣಾವಸ್ಥೆಯಲ್ಲಿದ್ದು, ದೈವಕ್ಕೆ ಸಂಬಂಧಿಸಿದ ಈ ಭಾಗದ ದೈವಾಭಿಮಾನಿಗಳು ಒಟ್ಟು ಸೇರಿ ಎರಡು ತಿಂಗಳ ಅವಧಿಯೊಳಗೆ ಸುಮಾರು 20 ಲಕ್ಷ ವೆಚ್ಚದಲ್ಲಿ ದೈವಸ್ಥಾನ, ಕಟ್ಟೆಗಳನ್ನು ನಿರ್‍ಮಿಸಿ ಪ್ರತಿಷ್ಠಾ ಬ್ರಹ್ಮಕಲಶ, ನೇಮೋತ್ಸವ ನಡೆಸಲು ಸಿದ್ಧತೆಗೊಳಿಸಿದ್ದಾರೆ.
ಎ. 25ರಂದು ಸಂಜೆ ತಂತ್ರಿಗಳ, ವೈದಿಕ ಆಗಮನದ ಬಳಿಕ ನಾನಾ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಎ. 26 ರಂದು ಬೆಳಗ್ಗೆ ಗಣಪತಿ ಹೋಮ, ಪ್ರತಿಷ್ಠಾ ಹೋಮ, ಬ್ರಹ್ಮಕಲಶ ಪೂಜೆ ನಡೆದ ಬಳಿಕ ಮಧ್ಯಾಹ್ನ 11.36 ರ ಕರ್ಕಾಟಕ ಲಗ್ನದಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಇತರ ವಿಧಿವಿಧಾನಗಳು ನಡೆಯಲಿದೆ. ಅನ್ನಸಂತರ್ಪಣೆಯ ಬಳಿಕ ಭಜನಾ ಸಂಕೀರ್ತನೆ, ನೃತ್ಯ ಭಜನೆ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆದು, ಎಣ್ಣೆ ಕೊಡುವ ಕಾರ್‍ಯಕ್ರಮ ನಡೆಯಲಿದೆ. ಬಳಿಕ ಧಾರ್ಮಿಕ ಸಭೆ, ಅನ್ನ ಸಂತರ್ಪಣೆಯ ನಂತರ ಶ್ರೀ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ತಿಳಿಸಿದರು.

 

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...