Sunday, January 25, 2026

ಪ್ರಾಥಮಿಕ ಶಾಲಾ ಮಕ್ಕಳ ಕುಟುಂಬಕ್ಕೆ ಹಾಗೂ ಆಶಾಕಾರ್ಯಕರ್ತೆಯರಿಗೆ ಕಿಟ್ ನೀಡಿದ ಶಾಲಾ ಶಿಕ್ಷಕಿ ಹಾಗೂ ಗ್ರಾ.ಪಂ.ಸದಸ್ಯ

ಬಂಟ್ವಾಳ : ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲು ಇಲ್ಲಿನ ಎಲ್ಲಾ ಮಕ್ಕಳ ಕುಟುಂಬಕ್ಕೆ ಹಾಗೂ ಕಳ್ಳಿಗೆ ಗ್ರಾಮದ ಆಶಾಕಾರ್ಯಕರ್ತೆಯರಿಗೆ ಅಂದಾಜು ಒಂದು ಲಕ್ಷ ಮೌಲ್ಯದ 100 ಕ್ಕಿಂತಲೂ ಮೇಲ್ಪಟ್ಟು ಆಹಾರ ಸಾಮಾಗ್ರಿ ಕಿಟ್, ಸಾನಿಟೈಜರ್ ಹಾಗೂ ಮಾಸ್ಕಗಳನ್ನು ಮಾಜಿ ಕಳ್ಳಿಗೆ ಗ್ರಾಮ ಪಂಚಾಯತು ಸದಸ್ಯ ಮಧುಸೂಧನ ಶೆಣೈ ಹಾಗೂ ಶಾಲಾ ಶಿಕ್ಷಕಿ ಭಾರತಿ ಶೇಷಪ್ಪ ಇವರ ಪೂರ್ಣ ಸಹಕಾರ ಹಾಗೂ ನೇತೃತ್ವದಲ್ಲಿ ಉದಾರ ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭ ದಲ್ಲಿ ಗ್ರಾಮ ಪಂಚಾಯತು ಸದಸ್ಯರಾದ ರವಿ ಜೈನ್, ಎಸ್ ಡಿ ಎಂ ಸಿ ಅಧ್ಯಕ್ಷೆ ರತ್ನ ಮುಖ್ಯ ಶಿಕ್ಷಕಿ ಶ್ರೀಮತಿ ಫ್ಲೋರಿನ್ ರೆಬೆಲ್ಲೊ ಉಪಸ್ಥಿತರಿದ್ದರು.

ವಿಜಯಲಕ್ಷ್ಮಿ ಮಧುಸೂಧನ್ ಶೆಣೈ ಸಹಕರಿಸಿದರು. ನಿವೃತ್ತ ಶಿಕ್ಷಕ ಶೇಷಪ್ಪ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...