Thursday, June 26, 2025

೪೫ ಕೋಟಿ ರೂಪಾಯಿಗಳ ನೇತ್ರಾವತಿ ನದಿ ಏತ ನೀರಾವರಿ ಯೋಜನೆಯ ಮಂಜೂರಾತಿಗಾಗಿ ಮುಖ್ಯಮಂತ್ರಿಗೆ ಮನವಿ

ಜೂ: , ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಮಾರು ೨೦೦೦ ಎಕರೆ ಕೃಷಿ ಭೂಮಿಗೆ ನೀರುಣಿಸುವ ೪೫ ಕೋಟಿ ರೂಪಾಯಿಗಳ ನೇತ್ರಾವತಿ ನದಿ ಏತ ನೀರಾವರಿ ಯೋಜನೆಯ ಮಂಜೂರಾತಿಗಾಗಿ  ಕಲ್ಲಡ್ಕದ ಡಾ| ಪ್ರಭಾಕರ ಭಟ್ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.  ನೇತ್ರಾವತಿ ನದಿ ದಂಡೆಗೆ ತಾಗಿಕೊಂಡು ಇರುವ ಈ ಬಾಳ್ತಿಲ ಗ್ರಾಮವು ಒಟ್ಟು ೩,೯೪೩ ಎಕರೆಗಳಾಗಿದ್ದು ೬೨೭೨ ಜನಸಂಖ್ಯೆಯನ್ನು ೧೩೦೦ ಕುಟುಂಬಗಳನ್ನು ಹೊಂದಿದ್ದು ಈ ಭಾಗದ ಜನರ ಬಹುದಿನಗಳ ನಿರೀಕ್ಷೆಯೊಂದು ಇದೀಗ ಕೈಗೂಡಿದಂತಾಗಿದೆ. ಈ ಯೋಜನೆಯಿಂದ ರೈತರ ಜಮೀನಿಗೆ ನೇರವಾಗಿ ನೀರನ್ನು ಹರಿಯ ಬಿಡುವುದಲ್ಲದೇ ಕೆರೆ ಬಾವಿ ಹಾಗೂ ಕೊಳವೆಬಾವಿಗಳ ನೀರಿನ ಮಟ್ಟ ಹಾಗೂ ಒಟ್ಟು ಅಂತರ್ಜಲದ ಮಟ್ಟವು ಮೇಲೇರಲಿದೆ ಹಾಗೂ ಇಡೀ ಗ್ರಾಮ ಹಚ್ಚಹಸಿರಾಗಲಿದೆ.
ಮುಖ್ಯಮಂತ್ರಿಗಳನ್ನು ಭೇಟಿಮಾಡಿದ ನಿಯೋಗದಲ್ಲಿ ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್, ಮಾಜಿ ಶಾಸಕರಾದ  ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಹಾಗೂ ಗ್ರಾಮಸ್ಥರಾದ  ಗೋಪಾಲ ಶೆಣೈ ಮತ್ತಿತರರು ಜೊತೆಗಿದ್ದರು

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...