Thursday, June 26, 2025

ರಾಜ್ಯ ಬಜೆಟ್ 2020-21: ಪ್ರಮುಖ ಮುಖ್ಯಾಂಶಗಳು

ಬೆಂಗಳೂರು: ಏಳನೇ ಬಾರಿಗೆ ಬಜೆಟ್​ ಮಂಡನೆ ಮಾಡಿದ ಸಿಎಂ, ಹಣಕಾಸು ಸಚಿವರು ಕೂಡ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಈ ಸಾಲಿನ ಬಜೆಟ್ ನಲ್ಲಿ ರೈತ ನಾಯಕ ಬಿ.ಎಸ್.ವೈ ಕೃಷಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. ಇಂದಿನ ಬಜೆಟ್ ಮಂಡನೆ ಮುಗಿದಿದ್ದು, ಇನ್ನು ನಾಳೆ ಬೆಳಗ್ಗೆ 10.30ಕ್ಕೆ ಬಜೆಟ್ ಅಧಿವೇಶನ ಮುಂದೂಡಿಕೆ. ರಾಜ್ಯದ ಈ ಬಾರಿಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ ಆಗಿದೆ.

ಸಿಎಂ ಬಿಎಸ್ ವೈ ಮಂಡಿಸಿದ ಬಜೆಟ್ ನ ಪ್ರಮುಖಾಂಶಗಳು ಇಂತಿವೆ:

  • ಮಹದಾಯಿ ಯೋಜನೆಗೆ 500 ಕೋಟಿ
  • ಮೀನುಗಾರರಿಗೆ ಕಿಸಾನ್ ಕಾರ್ಡ್ ವಿತರಣೆ
  • ಕ್ರೈಸ್ತ ಸಮುದಾಯಕ್ಕೆ 200 ಕೋಟಿ
  • ಆರ್ಯ ವೈಶ್ಯ ನಿಗಮಕ್ಕೆ 10 ಕೋಟಿ
  • ವಿಶ್ವಕರ್ಮ ಸಮುದಾಯಕ್ಕೆ 25 ಕೋಟಿ
  • 276 ಪಬ್ಲಿಕ್ ಶಾಲೆಗಳಿಗೆ 100 ಕೋಟಿ
  • ಶನಿವಾರ ಮಕ್ಕಳಿಗೆ ಶಾಲಾ ಬ್ಯಾಗ್ ಇಲ್ಲ
  • ಪ್ರತಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
  • ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
  • ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳಿಗೆ ಒಂದು ಲಕ್ಷ ನೀಡಲು ಕ್ರಮ
  • 10 ಲಕ್ಷ ಮನೆಗಳಿಗೆ ಗಂಗೆ ನೀರು ಸೌಲಭ್ಯ
  • ಅಬಕಾರಿ ಸುಂಕ ಶೇ. 6ರಷ್ಟು ಏರಿಕೆ
  • ಪೆಟ್ರೋಲ್ ಡಿಸೇಲ್ ದರ ಏರಿಕೆ
  • ಪೆಟ್ರೋಲ್, ಡಿಸೇಲ್ ಮೇಲೆ ಶೇ 3ರಷ್ಟು ತೆರಿಗೆ
  • ಭಾಗ್ಯಲಕ್ಷ್ಮಿ, ಬೈಸಿಕಲ್​ ಯೋಜನೆ ಮುಂದುವರಿಕೆ
  • ಪ್ರಧಾನಮಂತ್ರಿ ಕಿಸಾನ್​ ಯೋಜನೆಗೆ ₹4,000
  • ಸಣ್ಣ, ಅತಿಸಣ್ಣ ರೈತರಿಗೆ ₹10,000 ನೆರವು​
  • ಕಟ್ಟಡ ಕಾರ್ಮಿಕರು & ಸದಸ್ಯರಿಗೆ ಉಚಿತ ಪ್ರೀಪೇಯ್ಡ್ ಹೆಲ್ತ್ ಕಾರ್ಡ್
  • ನೆರೆಯಿಂದ ಬಿದ್ದಿದ್ದ 842 ಅಂಗನವಾಡಿಗಳ ಪುನರ್ ನಿರ್ಮಾಣ
  • ಹಾವೇರಿಯಲ್ಲಿ 20 ಹಾಸಿಗೆಗಳ ಆಯುಷ್ ಆಸ್ಪತ್ರೆ
  • 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಎನ್‌ಐಸಿಯು ಉನ್ನತೀಕರಣ
  • 400 ಉರ್ದು ಶಾಲೆಗಳಲ್ಲಿ ಉರ್ದು ಮಾದ್ಯಮದೊಂದಿಗೆ ಆಂಗ್ಲ ಮಾದ್ಯಮ ಆರಂಭ
  • ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಗೆ 10 ಕೋಟಿ
  • ಇಸ್ರೋ, ಎಚ್.ಎ.ಎಲ್ ಇತ್ಯಾದಿ ಪ್ರತಿಷ್ಟಿತ ಸಂಸ್ಥೆಗಳಿಗೆ ಲಘು‌ ಯುದ್ಧ ವಿಮಾನ, ಮದ್ಯಮ ಯುದ್ಧ ವಿಮಾನ ಬಿಡಿ ಭಾಗಗಳನ್ನು ಉತ್ಪಾದಿಸಲು ಸರ್ಕಾರಿ ಉಪಕರಣ ಮತ್ತು ತರಭೇತಿ ಕೇಂದ್ರಗಳಿಗೆ 20 ಕೋಟಿ ಅನುದಾನ
  • ಪೊಲೀಸ್ ಸಿಬ್ಬಂದಿಗೆ ಗೃಹ ಭಾಗ್ಯ ಯೋಜನೆ, ಗೃಹಭಾಗ್ಯ ಯೋಜನೆಗೆ 200 ರೂ. ಕೋಟಿ ರೂ. ಮೀಸಲು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...