Thursday, February 13, 2025

ಕೇಂದ್ರ ಬಜೆಟ್ 2020: ಯಾವುದರ ದರ ಹೆಚ್ಚು, ಯಾವುದಕ್ಕೆ ಕಡಿಮೆ ?

ನವದೆಹಲಿ: ಬಜೆಟ್‌ ಮಂಡನೆಯಾಗುತ್ತಿದ್ದಂತೆ ಎಲ್ಲರಿಗೂ ಕುತೂಹಲ. ಕಾಯೋದು ಯಾವುದಕ್ಕೆ ರೇಟ್‌ ಜಾಸ್ತಿ ಆಗಿದೆ, ಯಾವುದಕ್ಕೆ ಇಳಿಕೆ ಆಗಿದೆ ಅನ್ನೊ ಮಾಹಿತಿಗಾಗಿ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತನಲ್ಲಿ ಮಂಡಿಸಿದ 2020-2021ನೇ ಸಾಲಿನ ಬಜೆಟ್ ನಲ್ಲಿ ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಅದೇರೀತಿ ಅಬಕಾರಿ ಸುಂಕದ ಹೆಚ್ಚಳದೊಂದಿಗೆ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ. ವೈದ್ಯಕೀಯ ಸಾಧನಗಳ ಮೇಲೆ ಶೇ.5 ರಷ್ಟು ಹೆಲ್ತ್ ಸೆಸ್, ಆಟೋ ಮೊಬೈಲ್ ಬಿಡಿಭಾಗಗಳ ಮೇಲಿನ ಕಸ್ಟಮ್ಸ್ ಸುಂಕ ಹೆಚ್ಚಳಗೊಂಡಿದೆ. ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.
ಬೆಲೆ ಏರಿಕೆ : ಪೀಠೋಪಕರಣಗಳು, ಸ್ಯಾಂಡಲ್, ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು, ಕ್ಲೇ ಐರನ್, ಸ್ಟೀಲ್, ಕಾಪರ್,ಸೋಯಾ ಫೈಬರ್, ಸೋಯಾ ಪ್ರೋಟೀನ್, ವಾಣಿಜ್ಯ ವಾಹನಗಳ ಬಿಡಿಭಾಗಗಳು, ವಾಲ್ ಪ್ಯಾನ್ ಗಳು, ಕಚ್ಚಾಸಕ್ಕರೆ, ಕೃಷಿ ಆಧಾರಿತ ಜಾನುವಾರಗಳ, ವಾಣಿಜ್ಯ ವಾಹನಗಳ ಬೆಲೆ, ಮದ್ಯದ ಮೇಲಿನ ಅಬಕಾರಿ ಸುಂಕ ಹೆಚ್ಚಳ, ಪೆಟ್ರೋಲ್-ಡೀಸೆಲ್, ಗೋಡಂಬಿ, ತಾಳೆ ಎಣ್ಣೆ, ಬೆಳ್ಳಿ ಆಭರಣಗಳು, ಬಂಗಾರದ ಆಭರಣಗಳು, ಪ್ಲಾಸ್ಟಿಕ್, ರಬ್ಬರ್ ವಸ್ತುಗಳು, ಗ್ಲಾಸ್, ಮುದ್ರಣ ಕಾಗದ ಸಿಸಿಟಿವಿ, ಚಾರ್ಜರ್, ಅಡಾಪ್ಟರ್‌ಗಳ ಬೆಲೆ ಹೆಚ್ಚಳವಾಗಬಹುದು

ಬೆಲೆ ಇಳಿಕೆ: ವಿದೇಶದಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್, ಎಲೆಕ್ಟ್ರಿಕ್ ವಾಹನಗಳು, ಮೊಬೈಲ್ ಫೋನ್‌ಗಳ ಬಿಡಿಭಾಗಗಳು, ಪ್ಲಾಸ್ಟಿಕ್ ಆಧಾರಿತ ಕಚ್ಚಾ ಸರಕು, ಡಯಾಲಿಸಿಸ್ ಯಂತ್ರದ ಬೆಲೆಯಲ್ಲಿ ಇಳಿಕೆ, ಕೃತಕ ಕಿಡ್ನಿ, ಚರ್ಮೋತ್ಪನ್ನ, ಕಾರು, ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಕಡಿಮೆಯಾಗಲಿದೆ, ಬೇಳೆಕಾಳು, ಗೊಬ್ಬರ, ಬೀಜಗಳ ಬೆಲೆಯಲ್ಲಿ ಇಳಿಕೆಯಾಗಬಹುದು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...