Monday, January 26, 2026

ಕೇಂದ್ರ ಬಜೆಟ್ 2020: ಯಾವುದರ ದರ ಹೆಚ್ಚು, ಯಾವುದಕ್ಕೆ ಕಡಿಮೆ ?

ನವದೆಹಲಿ: ಬಜೆಟ್‌ ಮಂಡನೆಯಾಗುತ್ತಿದ್ದಂತೆ ಎಲ್ಲರಿಗೂ ಕುತೂಹಲ. ಕಾಯೋದು ಯಾವುದಕ್ಕೆ ರೇಟ್‌ ಜಾಸ್ತಿ ಆಗಿದೆ, ಯಾವುದಕ್ಕೆ ಇಳಿಕೆ ಆಗಿದೆ ಅನ್ನೊ ಮಾಹಿತಿಗಾಗಿ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತನಲ್ಲಿ ಮಂಡಿಸಿದ 2020-2021ನೇ ಸಾಲಿನ ಬಜೆಟ್ ನಲ್ಲಿ ಕಸ್ಟಮ್ಸ್ ಸುಂಕ ಹೆಚ್ಚಳದಿಂದಾಗಿ ಪೀಠೋಪಕರಣ, ಪಾದರಕ್ಷೆ ಬೆಲೆಗಳು ಏರಿಕೆಯಾಗಲಿವೆ. ಅದೇರೀತಿ ಅಬಕಾರಿ ಸುಂಕದ ಹೆಚ್ಚಳದೊಂದಿಗೆ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬೆಲೆಗಳು ಏರಿಕೆಯಾಗಲಿವೆ. ವೈದ್ಯಕೀಯ ಸಾಧನಗಳ ಮೇಲೆ ಶೇ.5 ರಷ್ಟು ಹೆಲ್ತ್ ಸೆಸ್, ಆಟೋ ಮೊಬೈಲ್ ಬಿಡಿಭಾಗಗಳ ಮೇಲಿನ ಕಸ್ಟಮ್ಸ್ ಸುಂಕ ಹೆಚ್ಚಳಗೊಂಡಿದೆ. ವಿದೇಶಗಳಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ. ಅದೇ ರೀತಿ ಎಲೆಕ್ಟ್ರಿಕ್ ವಾಹನಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ಪ್ಲಾಸ್ಟಿಕ್ ಆಧಾರಿತ ಕಚ್ಚಾ ವಸ್ತುಗಳ ಮೇಲಿನ ಕಸ್ಟಮ್ಸ್ ತೆರಿಗೆ ಇಳಿಸಲಾಗಿದೆ.
ಬೆಲೆ ಏರಿಕೆ : ಪೀಠೋಪಕರಣಗಳು, ಸ್ಯಾಂಡಲ್, ಸಿಗರೇಟ್, ತಂಬಾಕು ಉತ್ಪನ್ನಗಳು, ವೈದ್ಯಕೀಯ ಉಪಕರಣಗಳು, ಅಡುಗೆಮನೆಯಲ್ಲಿ ಬಳಸುವ ವಸ್ತುಗಳು, ಕ್ಲೇ ಐರನ್, ಸ್ಟೀಲ್, ಕಾಪರ್,ಸೋಯಾ ಫೈಬರ್, ಸೋಯಾ ಪ್ರೋಟೀನ್, ವಾಣಿಜ್ಯ ವಾಹನಗಳ ಬಿಡಿಭಾಗಗಳು, ವಾಲ್ ಪ್ಯಾನ್ ಗಳು, ಕಚ್ಚಾಸಕ್ಕರೆ, ಕೃಷಿ ಆಧಾರಿತ ಜಾನುವಾರಗಳ, ವಾಣಿಜ್ಯ ವಾಹನಗಳ ಬೆಲೆ, ಮದ್ಯದ ಮೇಲಿನ ಅಬಕಾರಿ ಸುಂಕ ಹೆಚ್ಚಳ, ಪೆಟ್ರೋಲ್-ಡೀಸೆಲ್, ಗೋಡಂಬಿ, ತಾಳೆ ಎಣ್ಣೆ, ಬೆಳ್ಳಿ ಆಭರಣಗಳು, ಬಂಗಾರದ ಆಭರಣಗಳು, ಪ್ಲಾಸ್ಟಿಕ್, ರಬ್ಬರ್ ವಸ್ತುಗಳು, ಗ್ಲಾಸ್, ಮುದ್ರಣ ಕಾಗದ ಸಿಸಿಟಿವಿ, ಚಾರ್ಜರ್, ಅಡಾಪ್ಟರ್‌ಗಳ ಬೆಲೆ ಹೆಚ್ಚಳವಾಗಬಹುದು

ಬೆಲೆ ಇಳಿಕೆ: ವಿದೇಶದಿಂದ ಆಮದು ಮಾಡಿಕೊಂಡ ನ್ಯೂಸ್ ಪ್ರಿಂಟ್, ಎಲೆಕ್ಟ್ರಿಕ್ ವಾಹನಗಳು, ಮೊಬೈಲ್ ಫೋನ್‌ಗಳ ಬಿಡಿಭಾಗಗಳು, ಪ್ಲಾಸ್ಟಿಕ್ ಆಧಾರಿತ ಕಚ್ಚಾ ಸರಕು, ಡಯಾಲಿಸಿಸ್ ಯಂತ್ರದ ಬೆಲೆಯಲ್ಲಿ ಇಳಿಕೆ, ಕೃತಕ ಕಿಡ್ನಿ, ಚರ್ಮೋತ್ಪನ್ನ, ಕಾರು, ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಕಡಿಮೆಯಾಗಲಿದೆ, ಬೇಳೆಕಾಳು, ಗೊಬ್ಬರ, ಬೀಜಗಳ ಬೆಲೆಯಲ್ಲಿ ಇಳಿಕೆಯಾಗಬಹುದು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...