Wednesday, January 28, 2026

ಕೃಷಿ ಕ್ಷೇತ್ರಕ್ಕೆ 2.83 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿದ್ದು, 2022 ರ ವೇಳೆಗೆ ಕೃಷಿ ಆದಾಯ ದ್ವಿಗುಣಗೊಳಿಸುವ ಗುರಿ ಹೊಂದಿದೆ: ಶಾಸಕ ರಾಜೇಶ್ ನಾಯ್ಕ್

 

ರೈತ ಮಹಿಳೆಯರಿಗಾಗಿ ಧಾನ್ಯ ಲಕ್ಷ್ಮಿ ಹೊಸ ಯೋಜನೆ ಜಾರಿಗೆ. ಕುಸುಮ್ ಯೋಜನೆ ವಿಸ್ತರಣೆ, ರೈತರ ಪಂಪ್‌ಸೆಟ್ ಸೌರ ವಿದ್ಯುತ್ ಜತೆ ಜೋಡಣೆ, ಫಸಲ್ ಭೀಮಾ ಯೋಜನೆಯಿಂದ 6.11 ಕೋಟಿ ರೈತರಿಗೆ ಅನುಕೂಲವಾಗಿದೆ. ಸಮತೋಲಿತ ರಸಗೊಬ್ಬರ ಬಳಕೆ ಯೋಜನೆ ಜಾರಿ ಮಾಡಲಾಗಿದೆ. ರಾಸಾಯನಿಕ ಗೊಬ್ಬರ ಬದಲು ಸಾವಯವ ಗೊಬ್ಬರ ಬಳಕೆಗೆ ಪ್ರೋತ್ಸಾಹ ನೀಡಲಾಗಿದೆ. ಬರಡು ಭೂಮಿಯಲ್ಲಿ ಸಾವಯವ ಕೃಷಿ ಮಾಡಲು ಪ್ರೋತ್ಸಾಹ. ದೇಶದ ಜಲಕ್ಷಾಮ ಪೀಡಿತ 100 ಜಿಲ್ಲೆಗಳಲ್ಲಿ ಜಲವರ್ಧನೆಗೆ ಕ್ರಮ.

20 ಲಕ್ಷ ರೈತರಿಗೆ ಸೋಲಾರ್ ಪಂಪ್ ವಿತರಣೆ. ಬರಡು ಭೂಮಿಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ರೈತರಿಗೆ ಅವಕಾಶ. ಕೃಷಿ ಮಾರುಕಟ್ಟೆ ಉದಾರೀಕರಣಗೊಳಿಸಲು ಕ್ರಮ. ಕೃಷಿ ಅಭಿವೃದ್ದಿಗೆ 16 ಅಂಶಗಳ ಕ್ರಿಯಾ ಯೋಜನೆ ಪ್ರಕಟಗೊಳಿಸಲಾಗಿದೆ.

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ನರೇಗಾ ಯೋಜನೆಯಡಿ ಜೇನು ಕೃಷಿಗೆ ಉತ್ತೇಜನ ನೀಡಲಿದೆ. ಕೃಷಿ ಉತ್ಪನ್ನಗಳಿಗಾಗಿ ಇ ಮಾರುಕಟ್ಟೆ ಸ್ಥಾಪನೆ ಮಾಡಲಿದೆ. ಜಾನುವಾರುಗಳ ಕಾಲು ಬಾಯಿ ರೋಗ ತಡೆಗೆ ಕ್ರಮ ಸೇರಿದಂತೆ ಕೃಷಿಗೆ ಮತ್ತು ರೈತರಿಗೆ ಸೇರಿದಂತೆ ಎಲ್ಲಾ ವರ್ಗದವರಿಗೂ ಅನುಕೂಲವಾಗುವಂತಹ ಬಜೆಟ್ ಇದಾಗಿದೆ.

ಪ್ರಧಾನಿ  ನರೇಂದ್ರ ಮೋದಿಯವರ ದೂರದೃಷ್ಟಿಯೊಂದಿಗೆ ಬಜೆಟ್ ಮಂಡಿಸಿರುವ ವಿತ್ತ ಸಚಿವೆ  ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು.

* ರಾಜೇಶ್ ನಾಯ್ಕ್ ಉಳಿಪ್ಪಾಡಿ
ಶಾಸಕರು, ಬಂಟ್ವಾಳ

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...