Tuesday, February 11, 2025

ಬುರೂಜ್ : ಸ್ಕೌಟ್ಸ್ – ಗೈಡ್ಸ್ ಪರೀಕ್ಷೆ

ಬಂಟ್ವಾಳ : ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಇಲ್ಲಿ ಭಾರತ್ ಸ್ಕೌಟ್ಸ್ – ಗೈಡ್ಸ್‌ನ ವಾಮದಪದವು ಸ್ಥಳೀಯ ಸಂಸ್ಥೆಗೆ ಒಳಪಟ್ಟ ಶಾಲೆಗಳಿಂದ ಸ್ಕೌಟ್ಸ್ – ಗೈಡ್ಸ್ ಮತ್ತು ಕಬ್ಸ್ – ಬುಲ್ ಬುಲ್ಸ್ ವಿದ್ಯಾರ್ಥಿಗಳು ಕ್ರಮವಾಗಿ ಸಂಸ್ಥೆಯು ನಡೆಸುವ ದ್ವಿತೀಯ ಸೋಪಾನ, ದ್ವಿತೀಯ ಚರಣ ಮತ್ತು ರಜತ್ ಪಂಖ್ ಪರೀಕ್ಷೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮ ಶಾಲಾ ಚೆಯರ್‌ಮೆನ್ ಜನಾಬ್ ಶೇಕ್ ರಹ್ಮತ್ತುಲ್ಲಾ ಕಾರ್ಯಧ್ಯಕ್ಷರು, ಎ.ಡಿ.ಸಿ. ವಾಮದಪದವು ಸ್ಥಳೀಯ ಸಂಸ್ಥೆ ಮತ್ತು ಸಂಚಾಲಕರು ಬುರೂಜ್ ಅವರಿಂದ ಉದ್ಘಾಟನೆಗೊಂಡಿತು. ಸ್ಕೌಟ್ಸ್ ವಿದ್ಯಾರ್ಥಿಯಾದ ರಕ್ಷಣ್ ಆರ್ ಅಡಪ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಮೋಹನ್ ಎಚ್, ಕಾರ್ಯದರ್ಶಿಗಳು ವಾಮದಪದವು ಸ್ಥಳಿಯ ಸಂಸ್ಥೆ, ಮತ್ತು ಜಯಶ್ರೀ ಬಿ., ವನಿತಾ, ರೇವತಿ, ಸುಷ್ಮಾ, ಖುರ್ಷಿದ್ ಬಾನು, ವಿಮಲಾ, ಶೋಭಾ, ಮಮತಾ ಮತ್ತು  ನಮಿತಾ ಪರೀಕ್ಷಾ ಶಿಬಿರವನ್ನು ನಡೆಸಿಕೊಟ್ಟರು. ಸುಮಾರು 101 ಪರೀಕ್ಷಾರ್ಥಿಗಳು ಹಾಜರಿದ್ದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...