Saturday, July 12, 2025

ಬುರೂಜ್ : ಟಾಟಾ ಬಿಲ್ಡಿಂಗ್ ಇಂಡಿಯಾ ಪ್ರಬಂಧ ಸ್ಪರ್ಧೆಯಲ್ಲಿ 6 ಪದಕಗಳು

ಬಂಟ್ವಾಳ : ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಬಂಟ್ವಾಳ ಇಲ್ಲಿ ಟಾಟಾರವರ 150ನೇ ವರ್ಷದ ಸವಿನೆನಪಿಗಾಗಿ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ವಿಭಾಗದ ಸ್ಪರ್ಧೆಗಳಲ್ಲಿ ದಿಯಾ ಎಸ್.ಶೆಟ್ಟಿ ಪ್ರಥಮ, ಸಹೀಮ ದ್ವಿತೀಯ, ಮತ್ತು ಮೈತ್ರಿ ಜಿ.ಪಿ. ತೃತೀಯ ಸ್ಥಾನ ಹಾಗೂ ಹೈಸ್ಕೂಲ್ ವಿಭಾಗದ ಸ್ಪರ್ಧೆಯಲ್ಲಿ ತೃಪ್ತಿ ಸಿ. ಶೆಟ್ಟಿ ಪ್ರಥಮ, ನಿಮ್ರಾ ಬಾನು ದ್ವಿತೀಯ ಮತ್ತು ತಬಸ್ಸುಮ್ ತೃತೀಯ ಸ್ಥಾನಗಳಿಸಿ ಸಂಸ್ಥೆಗೆ ಒಟ್ಟು 2 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕ ಗಳಿಸುವುದರೊಂದಿಗೆ ಸಂಸ್ಥೆಗೆ ಹೆಸರು ತಂದಿರುತ್ತಾರೆ. ಸಂಸ್ಥೆಯ ಸಾಧನೆಗೆ ಟಾಟಾ ಮಾರ್ಕೆಟಿಂಗ್ ಮತ್ತು ಕಾರ್ಪೊರೇಟ್ ಬ್ರಾಂಡ್‌ನ ಸೀನಿಯರ್ ಉಪಾಧ್ಯಕ್ಷರಾದ  ಅತುಲ್ ಅಗರ್‌ವಾಲ್‌ರವರು ಸಂಸ್ಥೆಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿರುತ್ತಾರೆ. ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಚಾಲಕರಾದ ಜನಾಬ್ ಶೇಕ್ ರಹ್ಮತ್ತುಲ್ಲಾಹ್ ಅಭಿನಂದಿಸಿದರು ಮತ್ತು ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...