Wednesday, February 12, 2025

ಬುರೂಜ್ : ಟಾಟಾ ಬಿಲ್ಡಿಂಗ್ ಇಂಡಿಯಾ ಪ್ರಬಂಧ ಸ್ಪರ್ಧೆಯಲ್ಲಿ 6 ಪದಕಗಳು

ಬಂಟ್ವಾಳ : ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಬಂಟ್ವಾಳ ಇಲ್ಲಿ ಟಾಟಾರವರ 150ನೇ ವರ್ಷದ ಸವಿನೆನಪಿಗಾಗಿ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ವಿಭಾಗದ ಸ್ಪರ್ಧೆಗಳಲ್ಲಿ ದಿಯಾ ಎಸ್.ಶೆಟ್ಟಿ ಪ್ರಥಮ, ಸಹೀಮ ದ್ವಿತೀಯ, ಮತ್ತು ಮೈತ್ರಿ ಜಿ.ಪಿ. ತೃತೀಯ ಸ್ಥಾನ ಹಾಗೂ ಹೈಸ್ಕೂಲ್ ವಿಭಾಗದ ಸ್ಪರ್ಧೆಯಲ್ಲಿ ತೃಪ್ತಿ ಸಿ. ಶೆಟ್ಟಿ ಪ್ರಥಮ, ನಿಮ್ರಾ ಬಾನು ದ್ವಿತೀಯ ಮತ್ತು ತಬಸ್ಸುಮ್ ತೃತೀಯ ಸ್ಥಾನಗಳಿಸಿ ಸಂಸ್ಥೆಗೆ ಒಟ್ಟು 2 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕ ಗಳಿಸುವುದರೊಂದಿಗೆ ಸಂಸ್ಥೆಗೆ ಹೆಸರು ತಂದಿರುತ್ತಾರೆ. ಸಂಸ್ಥೆಯ ಸಾಧನೆಗೆ ಟಾಟಾ ಮಾರ್ಕೆಟಿಂಗ್ ಮತ್ತು ಕಾರ್ಪೊರೇಟ್ ಬ್ರಾಂಡ್‌ನ ಸೀನಿಯರ್ ಉಪಾಧ್ಯಕ್ಷರಾದ  ಅತುಲ್ ಅಗರ್‌ವಾಲ್‌ರವರು ಸಂಸ್ಥೆಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿರುತ್ತಾರೆ. ಪದಕ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಚಾಲಕರಾದ ಜನಾಬ್ ಶೇಕ್ ರಹ್ಮತ್ತುಲ್ಲಾಹ್ ಅಭಿನಂದಿಸಿದರು ಮತ್ತು ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...