Thursday, February 13, 2025

ತುಳುನಾಡಿನ ಆಚಾರಗಳ ಉಳಿವಿಗೆ ಆಟಿ ಕೂಟ ಅಗತ್ಯ

ಬಂಟ್ವಾಳ: ಬುರೂಜ್ ಆ. ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಇಲ್ಲಿ ಆಟಿದ ಕೂಟ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು  ಶಂಕರ ಶೆಟ್ಟಿ ಉಪಾಧ್ಯಕ್ಷರು ಗ್ರಾ.ಪಂ. ಇರ್ವತ್ತೂರು ಕಲಸೆಗೆ ಅಕ್ಕಿ ಹಾಕುವ ಮೂಲಕ ಉದ್ಘಾಟಿಸಿದರು. ಇಂತಹ ಆಚರಣೆಗಳಿಂದ ನಮ್ಮ ಹಳ್ಳಿ ತಿಂಡಿ ತಿನಿಸುಗಳು ಮತ್ತೊಮ್ಮೆ ನೆನಪಿಸಿದಂತಾಗುತ್ತದೆ ಎಂದರು.

ಪ್ರಶಾಂತ್ ಕೋಟ್ಯಾನ್ ಸದಸ್ಯರು ಗ್ರಾ. ಪಂ. ಇರ್ವತ್ತೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯಕ್ರಮದ ಆಚರಣೆಯ ಮಹತ್ವವನ್ನು ಮಕ್ಕಳು ತಿಳಿದು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಿ ಎಂದರು. ಆಧುನೀಕರಣದತ್ತ ನಾವು ಸಾಗುತ್ತಿದ್ದು, ನಮ್ಮ ಹಳ್ಳಿ ತಿನಿಸುಗಳನ್ನೇ ಮರೆಯುತ್ತಿದ್ದೇವೆ. ಫಾಸ್ಟ್ ಫುಡ್‌ನ್ನು ಇಂದಿನ ಮಕ್ಕಳು ಅವಲಂಬಿಸುತ್ತಿದ್ದು, ಕೆಟ್ಟ ಪರಿಣಾಮವನ್ನು ಮುಂದೆ ಜೀವನದಲ್ಲಿ ಅನುಭವಿಸಬೇಕಾಗಬಹುದು ಎಂದು ಜನಾಬ್ ಶೇಕ್ ರಹ್ಮತ್ತುಲ್ಲಾ ಸಂಚಾಲಕರು ಬುರೂಜ್ ಮಕ್ಕಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ  ಸುಧೀಂದ್ರ ಗ್ರಾ. ಪಂ. ಸದಸ್ಯರು ಇರ್ವತ್ತೂರು, ಗೀತಾ ಶಿಕ್ಷಕರು ಕಲಾಬಾಗಿಲು ಅಂಗನವಾಡಿ, ಜಯಶ್ರೀ.ಬಿ. ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು.ವಿದ್ಯಾರ್ಥಿಗಳಿಂದ ತುಳುಗಾದೆ ಒಗಟುಗಳು, ತುಳು ಪದ್ಯಗಳು, ಭಾಷಣ ಹಳ್ಳಿ ತಿನಿಸುಗಳ ಪ್ರದರ್ಶನ ಇತ್ಯಾದಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆದವು. ಕಾರ್ಯಕ್ರಮದ ನಿರೂಪಣೆಯನ್ನು  ಪವಿತ್ರಾ ಶೆಟ್ಟಿ, ಸ್ವಾಗತ ಭಾಷಣವನ್ನು  ಹರಿಣಾಕ್ಷಿ ಹಾಗೂ  ಚೇತನಾ ಜೈನ್ ವಂದನಾರ್ಪಣೆಗೈದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...