Wednesday, January 28, 2026

ತುಳುನಾಡಿನ ಆಚಾರಗಳ ಉಳಿವಿಗೆ ಆಟಿ ಕೂಟ ಅಗತ್ಯ

ಬಂಟ್ವಾಳ: ಬುರೂಜ್ ಆ. ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಇಲ್ಲಿ ಆಟಿದ ಕೂಟ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು  ಶಂಕರ ಶೆಟ್ಟಿ ಉಪಾಧ್ಯಕ್ಷರು ಗ್ರಾ.ಪಂ. ಇರ್ವತ್ತೂರು ಕಲಸೆಗೆ ಅಕ್ಕಿ ಹಾಕುವ ಮೂಲಕ ಉದ್ಘಾಟಿಸಿದರು. ಇಂತಹ ಆಚರಣೆಗಳಿಂದ ನಮ್ಮ ಹಳ್ಳಿ ತಿಂಡಿ ತಿನಿಸುಗಳು ಮತ್ತೊಮ್ಮೆ ನೆನಪಿಸಿದಂತಾಗುತ್ತದೆ ಎಂದರು.

ಪ್ರಶಾಂತ್ ಕೋಟ್ಯಾನ್ ಸದಸ್ಯರು ಗ್ರಾ. ಪಂ. ಇರ್ವತ್ತೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯಕ್ರಮದ ಆಚರಣೆಯ ಮಹತ್ವವನ್ನು ಮಕ್ಕಳು ತಿಳಿದು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಿ ಎಂದರು. ಆಧುನೀಕರಣದತ್ತ ನಾವು ಸಾಗುತ್ತಿದ್ದು, ನಮ್ಮ ಹಳ್ಳಿ ತಿನಿಸುಗಳನ್ನೇ ಮರೆಯುತ್ತಿದ್ದೇವೆ. ಫಾಸ್ಟ್ ಫುಡ್‌ನ್ನು ಇಂದಿನ ಮಕ್ಕಳು ಅವಲಂಬಿಸುತ್ತಿದ್ದು, ಕೆಟ್ಟ ಪರಿಣಾಮವನ್ನು ಮುಂದೆ ಜೀವನದಲ್ಲಿ ಅನುಭವಿಸಬೇಕಾಗಬಹುದು ಎಂದು ಜನಾಬ್ ಶೇಕ್ ರಹ್ಮತ್ತುಲ್ಲಾ ಸಂಚಾಲಕರು ಬುರೂಜ್ ಮಕ್ಕಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ  ಸುಧೀಂದ್ರ ಗ್ರಾ. ಪಂ. ಸದಸ್ಯರು ಇರ್ವತ್ತೂರು, ಗೀತಾ ಶಿಕ್ಷಕರು ಕಲಾಬಾಗಿಲು ಅಂಗನವಾಡಿ, ಜಯಶ್ರೀ.ಬಿ. ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು.ವಿದ್ಯಾರ್ಥಿಗಳಿಂದ ತುಳುಗಾದೆ ಒಗಟುಗಳು, ತುಳು ಪದ್ಯಗಳು, ಭಾಷಣ ಹಳ್ಳಿ ತಿನಿಸುಗಳ ಪ್ರದರ್ಶನ ಇತ್ಯಾದಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆದವು. ಕಾರ್ಯಕ್ರಮದ ನಿರೂಪಣೆಯನ್ನು  ಪವಿತ್ರಾ ಶೆಟ್ಟಿ, ಸ್ವಾಗತ ಭಾಷಣವನ್ನು  ಹರಿಣಾಕ್ಷಿ ಹಾಗೂ  ಚೇತನಾ ಜೈನ್ ವಂದನಾರ್ಪಣೆಗೈದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...