Wednesday, July 2, 2025

ತುಳುನಾಡಿನ ಆಚಾರಗಳ ಉಳಿವಿಗೆ ಆಟಿ ಕೂಟ ಅಗತ್ಯ

ಬಂಟ್ವಾಳ: ಬುರೂಜ್ ಆ. ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಇಲ್ಲಿ ಆಟಿದ ಕೂಟ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು  ಶಂಕರ ಶೆಟ್ಟಿ ಉಪಾಧ್ಯಕ್ಷರು ಗ್ರಾ.ಪಂ. ಇರ್ವತ್ತೂರು ಕಲಸೆಗೆ ಅಕ್ಕಿ ಹಾಕುವ ಮೂಲಕ ಉದ್ಘಾಟಿಸಿದರು. ಇಂತಹ ಆಚರಣೆಗಳಿಂದ ನಮ್ಮ ಹಳ್ಳಿ ತಿಂಡಿ ತಿನಿಸುಗಳು ಮತ್ತೊಮ್ಮೆ ನೆನಪಿಸಿದಂತಾಗುತ್ತದೆ ಎಂದರು.

ಪ್ರಶಾಂತ್ ಕೋಟ್ಯಾನ್ ಸದಸ್ಯರು ಗ್ರಾ. ಪಂ. ಇರ್ವತ್ತೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯಕ್ರಮದ ಆಚರಣೆಯ ಮಹತ್ವವನ್ನು ಮಕ್ಕಳು ತಿಳಿದು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಿ ಎಂದರು. ಆಧುನೀಕರಣದತ್ತ ನಾವು ಸಾಗುತ್ತಿದ್ದು, ನಮ್ಮ ಹಳ್ಳಿ ತಿನಿಸುಗಳನ್ನೇ ಮರೆಯುತ್ತಿದ್ದೇವೆ. ಫಾಸ್ಟ್ ಫುಡ್‌ನ್ನು ಇಂದಿನ ಮಕ್ಕಳು ಅವಲಂಬಿಸುತ್ತಿದ್ದು, ಕೆಟ್ಟ ಪರಿಣಾಮವನ್ನು ಮುಂದೆ ಜೀವನದಲ್ಲಿ ಅನುಭವಿಸಬೇಕಾಗಬಹುದು ಎಂದು ಜನಾಬ್ ಶೇಕ್ ರಹ್ಮತ್ತುಲ್ಲಾ ಸಂಚಾಲಕರು ಬುರೂಜ್ ಮಕ್ಕಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ  ಸುಧೀಂದ್ರ ಗ್ರಾ. ಪಂ. ಸದಸ್ಯರು ಇರ್ವತ್ತೂರು, ಗೀತಾ ಶಿಕ್ಷಕರು ಕಲಾಬಾಗಿಲು ಅಂಗನವಾಡಿ, ಜಯಶ್ರೀ.ಬಿ. ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು.ವಿದ್ಯಾರ್ಥಿಗಳಿಂದ ತುಳುಗಾದೆ ಒಗಟುಗಳು, ತುಳು ಪದ್ಯಗಳು, ಭಾಷಣ ಹಳ್ಳಿ ತಿನಿಸುಗಳ ಪ್ರದರ್ಶನ ಇತ್ಯಾದಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆದವು. ಕಾರ್ಯಕ್ರಮದ ನಿರೂಪಣೆಯನ್ನು  ಪವಿತ್ರಾ ಶೆಟ್ಟಿ, ಸ್ವಾಗತ ಭಾಷಣವನ್ನು  ಹರಿಣಾಕ್ಷಿ ಹಾಗೂ  ಚೇತನಾ ಜೈನ್ ವಂದನಾರ್ಪಣೆಗೈದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...