Tuesday, July 15, 2025

ನವೋದಯ ಕನ್ನಡ ಪರೀಕ್ಷೆ : ಬುರೂಜ್ ವಿದ್ಯಾರ್ಥಿಗಳ ಸಾಧನೆ

ಬಂಟ್ವಾಳ: ನವೋದಯ ಪ್ರಕಾಶನ ಚಿತ್ರದುರ್ಗ ಸಂಘಟಿಸುವ ನವೋದಯ ಕನ್ನಡ ಪರೀಕ್ಷೆಯಲ್ಲಿ ಮೂಡುಪಡುಕೋಡಿ ರಝಾನಗರದ ಬುರೂಜ್ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಾಧನೆಗೈದಿದ್ದಾರೆ.

4ನೇ ತರಗತಿ ವಿದ್ಯಾರ್ಥಿ ತೃಷಾಗೆ ರಾಜ್ಯ ರ್‍ಯಾಂಕ್, 1ನೇ ತರಗತಿ ವಿದ್ಯಾರ್ಥಿ ಜೀವನ್ ಎಂ.ಕೆ.  ಜಿಲ್ಲಾ ರ್‍ಯಾಂಕ್ ಹಾಗೂ ಮೋಹ್ಸಿನಾ ಬಾನು ಮುಕ್ತಾರ್ ತಾಲೂಕು ಮಟ್ಟದ ರ್‍ಯಾಂಕ್ ಪಡೆದಿದ್ದಾರೆ. ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಶೇಕ್ ರಹ್ಮತ್ತುಲ್ಲಾ, ಮುಖ್ಯ ಶಿಕ್ಷಕಿ ಜಯಶ್ರೀ ಬಿ. ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...