Friday, January 30, 2026

ಮತ್ತೆ ವಿಶ್ವದಲ್ಲೇ ದಾಖಲೆ ಮಟ್ಟಕ್ಕೆ ಏರಿದ ಭಾರತದ ಕೊರೋನ ಪಾಸಿಟಿವ್, ಸಾವಿನ ಸಂಖ್ಯೆ

ದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,46,786 ಮಂದಿಗೆ ಕೊರೋನ ಸೋಂಕು ಧೃಡಪಟ್ಟಿದ್ದು 2,624 ಮಂದಿ ಮೃತಪಟ್ಟಿದ್ದಾರೆ. ಈ ಎರಡೂ ಪ್ರಕರಣಗಳು ಇಡೀ ವಿಶ್ವದಲ್ಲಿ ಈವರೆಗೆ ಒಂದೇ ದಿನದಲ್ಲಿ ದಾಖಲಾದ ಅತ್ಯಧಿಕ ಪಾಸಿಟಿವ್ ಮತ್ತು ಸಾವಿನ ದಾಖಲೆಯಾಗಿದೆ.

ತೀವ್ರ ಸ್ವರೂಪದ ಕೊರೋನ ಅಟ್ಟಹಾಸಕ್ಕೆ ತುತ್ತಾಗಿರುವ ಜಗತ್ತಿನ ರಾಷ್ಟçಗಳ ಪೈಕಿ ಶುಕ್ರವಾರ ಬ್ರೆಝಿಲ್‌ನಲ್ಲಿ 79,719, ಅಮೆರಿಕದಲ್ಲಿ 62,642 ಮತ್ತು ಟರ್ಕಿಯಲ್ಲಿ 54,791 ಪ್ರಕರಣಗಳು ದಾಖಲಾಗಿವೆ. ನಿನ್ನೆ ವಿಶ್ವಾದ್ಯಂತ ಒಟ್ಟು 8.9 ಲಕ್ಷ ಹೊಸ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ ಭಾರತ ಒಂದರಲ್ಲೇ 3,46,786 ಹೊಸ ಪ್ರಕರಣ ದಾಖಲಾಗಿರುವುದು ಆತಂಕಕಾರಿಯಾಗಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,66,10,481, ಒಟ್ಟು ಗುಣಮುಖರಾದವರ ಸಂಖ್ಯೆ 1,38,67,997, ಒಟ್ಟು ಸಾವಿನ ಸಂಖ್ಯೆ 1,89,544, ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 25,52,940 ಆಗಿದೆ.

ಇನ್ನು ಕರ್ನಾಟಕದಲ್ಲಿ ಶುಕ್ರವಾರ 26,962 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಗರ ಪ್ರದೇಶವೊಂದರಲ್ಲೇ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಕೊರೊನಾ ಸೋಂಕಿನಿAದಾಗಿ 190 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ 14,075 ಮಂದಿ ಸೋಂಕಿನಿAದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 12,74,959 ಪ್ರಕರಣಗಳು ದಾಖಲಾಗಿದ್ದು ಸದ್ಯ 214311 ಸಕ್ರಿಯ ಪ್ರಕರಣಗಳಿವೆ.

More from the blog

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...