Friday, February 7, 2025

ಕುಡಿಯುವ ನೀರಿನ ಸಮಸ್ಯೆಗೆ ಮೊದಲ ಆದ್ಯತೆ ನೀಡಿ : ಪಿಡಿಒಗಳಿಗೆ ಜಿ.ಪಂ.ಸಿ.ಒ.ಖಡಕ್ ಆದೇಶ

ಬಂಟ್ವಾಳ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಪ್ರಥಮ ಆದ್ಯತೆಯ ಲ್ಲಿ ಕೆಲಸ ಮಾಡಲು ಜಿ.ಪಂ.ಸಿ.ಒ.ಡಾ!ಸೆಲ್ವಮಣಿ ಸೂಚನೆ ನೀಡಿದ್ದಾರೆ.
ಅವರು ಬಂಟ್ವಾಳ ತಾಪಂ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ತಾಲೂಕು ಮಟ್ಟದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖಾಧಿಕಾರಿಗಳ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆನೀಡಿದರು  .

ಟಾಸ್ಕ್ ಫೋರ್ಸ್ ನಲ್ಲಿ ಅನುದಾನಗಳು ಬಂದ ಕಡೆಗಳಲ್ಲಿ ಬೇಡಿಕೆ ಬದ್ದವಾಗಿ ಹೊಸ ಬೋರ್ ವೆಲ್ , ಹಳೆಯ ಬೋರ್ ವೆಲ್ ಗಳ ಆಳ ಮಾಡುವುದು ಹಾಗೂ ಹಳೆಯ ಬೋರ್ ವೆಲ್ ಗಳ ಕೆಸರು ತೆಗೆಯುವ ಕೆಲಸ ಗಳು ಇದ್ದಲ್ಲಿ ತುರ್ತಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಪೂರ್ವಯೋಜಿತ ಕಾಮಗಾರಿಗಳ ಬಗ್ಗೆ ರೂಪುರೇಷೆ ಗಳು ತಯಾರಾಗಿದ್ದು 31 ಕಾಮಗಾರಿಗಳು ನಡೆಯುತ್ತಿದೆ. ಇನ್ನು ಹೆಚ್ಚಿನ ಹಣ ಬೇಕಾದಲ್ಲಿ ಇನ್ನಷ್ಟು ಹಣ ನೀಡಲು ಸರಕಾರ ರೆಡಿಯಾಗಿದೆ ಎಂದು ಅವರು ತಿಳಿಸಿದರು.

ತುರ್ತು ಕುಡಿಯುವ ನೀರಿನ ಸಮಸ್ಯೆ ತಾಲೂಕಿನ ಎಲ್ಲೆಲ್ಲಿ ಇದೆಯೋ ಅವುಗಳ ಬಗ್ಗೆ ಗರಿಷ್ಠ ಆದ್ಯತೆ ನೀಡಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್. ಹೇಳಿದ್ದಾರೆ.
ಸರಕಾರಿ ಬೋರುವೆಲ್ ಗಳಲ್ಲಿ ನೀರು ಇಲ್ಲದ ಕಡೆಗಳಲ್ಲಿ ಖಾಸಗಿ ಬೋರ್ ವೆಲ್ ಗಳ ನೀರು ಪಡೆದು ಸಮಸ್ಯೆ ಯಿರುವ ಕಡೆಗಳಿಗೆ ಟ್ಯಾಂಕ್ ರ್ ಮೂಲಕ ಅಥವಾ ಬೇರೆ ಮೂಲಗಳ ಮೂಲಕ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಲ್ಲದೇ ಬಹುತೇಕ ಕಡೆಗಳಲ್ಲಿ ಈ ಕೆಲಸ ನಡೆಯುತ್ತಿದೆ.
ನೀರು ಕೊಡುವ ಖಾಸಗಿ ಬೋರ್ ವೆಲ್ ಗಳ ಮಾಲೀಕರಿಗೆ ಇಲಾಖೆ ಅದರ ಮೌಲ್ಯ ನೀಡಿ ಪಡೆಯುತ್ತದೆ ಎಂದು ಅವರು ಹೇಳಿದರು.

ಸಮಸ್ಯೆಗೆ ಸ್ಪಂದಿಸಿ:

ಆದ್ಯತೆ ಮೇರೆಗೆ ಎಲ್ಲೆಲ್ಲಿ ಸಮಸ್ಯೆ ಇದೆಯೋ ಅಲ್ಲಿ ಒದಗಿಸುವ ಕಾರ್ಯ ನಡೆಸಿ, ಜೂನ್ ೧ರಂದು ಮಳೆ ಶುರುವಾಗುವ ಮೊದಲು ಸಿದ್ಧತೆಗಳನ್ನೂ ನಡೆಸಬೇಕು. ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಪಂಚಾಯತ್‌ಗೆ ಮೂರು ವೆಂಟೆಡ್ ಡ್ಯಾಂ
ಪ್ರತಿಯೊಂದು ಬೋರ್ ವೆಲ್ ರೀಚಾರ್ಜ್ ಆಗಬೇಕು, ಪ್ರತಿಯೊಂದು ಪಂಚಾಯತ್ ನಲ್ಲಿ ವೆಂಟೆಡ್ ಡ್ಯಾಂ ಕನಿಷ್ಠ ಮೂರು ನಿರ್ಮಾಣವಾಗುವಂತೆ ಪಿಡಿಒಗಳು ಆಸ್ಥೆ ವಹಿಸಬೇಕು. ವಾರದೊಳಗೆ ಪ್ರತಿ ಪಂಚಾಯತ್ ಗಳ ಪಿಡಿಒಗಳು ೧೦ ಹೊಸ ಕೆಲಸಗಳನ್ನು ಗುರುತಿಸಿ ಈ ಕುರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸೆಲ್ವಮಣಿ ಚುರುಕು ಮುಟ್ಟಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...