Monday, January 26, 2026

Bantwal : ನಿಯಂತ್ರಣ ತಪ್ಪಿ ಕಾರು ಪಲ್ಟಿ – ಚಾಲಕನಿಗೆ ಗಂಭೀರ ಗಾಯ..

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ – ಬೆಂಗಳೂರು ರಸ್ತೆಯ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.

ಚಾಲಕ ಕಡೇಶಿವಾಲಯ ನಿವಾಸಿ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಪ್ಪು ಕಲ್ಲಿನ ಕೆತ್ತನೆ (ಶಿಲ್ಪಿ) ಯ ಕೆಲಸ ಮಾಡುತ್ತಿರುವ ರಂಜಿತ್ ಅವರು ಕಡೇಶಿವಾಲಯ ಮನೆಯಿಂದ ಶಂಭೂರು ಕಡೆಗೆ ಕಾರಿನಲ್ಲಿ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಕಾರು ಹೆದ್ದಾರಿಯಲ್ಲಿ ಪಲ್ಟಿಯಾದ ರಭಸಕ್ಕೆ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ರಂಜಿತ್ ನನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡುಹೋಗಲಾಗಿದೆ.

ಈ ವೇಳೆ ಅತ ಮಾತನಾಡಿದ್ದು, ಬೆಳಿಗ್ಗೆ ಲಾರಿ ಅಪಘಾತದಲ್ಲಿ ಮೃತರಾದ ಚಿದಾನಂದ ಅವರ ಮನೆಗೆ ತೆರಳುವುದಾಗಿ ತಿಳಿಸಿದ್ದು, ಕಾರಿನ ಗ್ಲಾಸ್ ಮೇಲೆ ವಿರುದ್ದ ದಿಕ್ಕಿನಲ್ಲಿ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ಚೆಲ್ಲಿದ್ದು ನಿಯಂತ್ರಣ ಕಳೆದುಕೊಂಡಿತು ಎಂದು ಹೇಳಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆದರೆ ಸತ್ಯಸಂಗತಿ ಪೋಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...

ವಿಟ್ಲ ಜಾತ್ರೋತ್ಸವದಲ್ಲಿ ಮನರಂಜಿಸಿದ ವಿಟ್ಲೋತ್ಸವ..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾಲಾವಧಿ ಜಾತ್ರೋತ್ಸವದಲ್ಲಿ ಮಂಗಳವಾರ ರಾತ್ರಿ ದೇವರ ಹೂ ತೇರು ಉತ್ಸವ ನಡೆಯಿತು. ವಿಆರ್ ಸಿ ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ ವಿಟ್ಲ ಸಾರಥ್ಯದಲ್ಲಿ 33...

ಮಾಣಿ : ಸ್ವಚ್ಛ ಗ್ರಾಮ ಅಭಿಯಾನ ಕಾರ್ಯಕ್ರಮ..

ಬಂಟ್ವಾಳ : ಮಾಣಿ ಗ್ರಾಮ ಪಂಚಾಯತ್, ಜನ ಶಿಕ್ಷಣ ಟ್ರಸ್ಟ್, ಮಹಿಳಾ ಸಾಂತ್ವನ ಕೇಂದ್ರ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಣಿಕ್ಯ ಸಂಜೀವಿನಿ ಒಕ್ಕೂಟ ಹಾಗೂ ಸಂಘ ಸಂಸ್ಥೆಗಳ ಜಂಟಿ...