Tuesday, January 27, 2026

ಸಾಕಷ್ಟು ಕುತೂಹಲ ಸೃಷ್ಟಿಸಿದ್ದ ಪ್ರಕರಣ ಭೇದಿಸಿದ ಬಂಟ್ವಾಳ ಪೋಲೀಸರು

ಬಂಟ್ವಾಳ: ಒಂದೇ ಪ್ರಕರಣಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ದೂರುಗಳು ಸಾಕಷ್ಟು ಕುತೂಹಲ ಸೃಷ್ಟಿಸಿದ್ದ ಪ್ರಕರಣವೊಂದನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿ.ಮೂಡ ಗ್ರಾಮದ ತಾಳಿಪಡ್ಪು ಮಸೀದಿಯ ಕಳವು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ತಾಳಿಪಡ್ಪು ನಿವಾಸಿ ಮಹಮ್ಮದ್ ಆಶೀಫ್(೨೬) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನ ವಿಽಸಲಾಗಿದೆ. ಈತ ಮಸೀದಿಯ ಹಳೆಯ ತಾಮ್ರದ ಹಂಡೆ ಹಾಗೂ ಕೇಬಲ್ ಕಳವು ಮಾಡಿರುವ ಕುರಿತು ಹಿದಾಯುತ್ತುಲ್ ಇಸ್ಲಾಂ ಮದರಸ ಕಮಿಟಿಯ ಅಧ್ಯಕ್ಷ ಸೈಯದ್ ಪಲೂಲ್ ಪೊಲೀಸರಿಗೆ ದೂರು ನೀಡಿದ್ದರು.

ಬಂಟ್ವಾಳ ನಗರ ಠಾಣೆಗೆ ಹೊಸದಾಗಿ ಬಂದ ಇನ್ಸ್ಪೆಕ್ಟರ್ ಚೆಲುವರಾಜು ಅವರ ನೇತೃತ್ವದಲ್ಲಿ ಸಬ್‌ಇನ್ಸ್ಪೆಕ್ಟರ್‌ಗಳಾದ ಅವಿನಾಶ್, ಕಲೈಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಽಸಿದ್ದಾರೆ. ಜತೆಗೆ ಕಳವು ನಡೆಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕುತೂಹಲವೆಂಬಂತೆ ಬಂಧಿತ ಆರೋಪಿ ಕೂಡ ಮಹಮ್ಮದ್ ಆಶೀಫ್ ಕೂಡ ಹಸೈನಾರ್ ಹಾಗೂ ಇತರರ ವಿರುದ್ಧ ಹಲ್ಲೆಯ ಆರೋಪ ಹೊರಿಸಿ ದೂರು ನೀಡಿದ್ದನು. ತಾನು ತಾಳಿಪಡ್ಪಿನಲ್ಲಿ ೨ ವರ್ಷಗಳಿಂದ ಲೀಸಿಗೆ ಮನೆ ಪಡೆದು ವಾಸಿಸುತ್ತಿದ್ದೇನೆ. ಆದರೆ ಮನೆಯವರು ತನ್ನ ಹಣ ನೀಡದೇ ಇರುವುದರಿಂದ ಅಲ್ಲಿಂದ ಎದ್ದಿರಲಿಲ್ಲ.

ಇದನ್ನು ಸಹಿಸದೆ ತನ್ನ ವಿರುದ್ಧ ಮಸೀದಿಯಲ್ಲಿ ಕಳವು ನಡೆಸಿದ ಆರೋಪ ಹೊರಿಸಿ ಹಲ್ಲೆ ನಡೆಸಲಾಗಿದೆ ಎಂದು ದೂರು ನೀಡಿದ್ದನು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...