Friday, July 11, 2025

ಬಿ.ಸಿ.ರೋಡಿನಲ್ಲಿ ಸೀಸಿ ಕ್ಯಾಮರ ಕಣ್ಗಾವಲು !

ಬಂಟ್ವಾಳ : ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಬಿ.ಸಿ.ರೋಡಿನಲ್ಲಿ ಕೊನೆಗೂ ಸೀಸಿ ಕ್ಯಾಮೆರಾ ಕಣ್ಗಾವಲು ಇರಿಸಲಾಗಿದೆ. ಇನ್ನು ಮುಂದೆ ವಾಹನ ಸವಾರರು ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದರೆ, ತಮ್ಮ ವಾಹನ ನಂಬರ್ ನ ಆಧಾರದಲ್ಲಿ ಮನೆಗೆ ನೊಟೀಸ್ ತಲುಪಲಿದ್ದು, ಅಪಾರ ಪ್ರಮಾಣದ ದಂಡವನ್ನು ತೆರಬೇಕಾದೀತು. ಈ ಹಿಂದೆ  ಗಲಭೆ ಸಂದರ್ಭ ಮಾತ್ರ ತಾಲೂಕಿನ ಹೃದಯಭಾಗವಾದ ಬಿ. ಸಿ. ರೋಡು ಸಹಿತ ಕೆಲವೊಂದು ಆಯಕಟ್ಟಿನ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಸೀಸಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ಇರಿಸಲಾಗಿತ್ತು. ಸೀಸಿ ಕ್ಯಾಮರಾದಿಂದ ವಿವಿಧ ಅಪರಾಧ ಚಟುವಟಿಕೆಯನ್ನು ಪತ್ತೆಹಚ್ಚುವುದು ಸೇರಿದಂತೆ ಹಲವಾರು ಸಂದರ್ಭದಲ್ಲಿ ಪೊಲೀಸರ ತನಿಖೆಗೂ ಸಹಕಾರವಾಗುತಿತ್ತು. ಆದರೆ  ಕಳೆದ ಬಾರಿ  ಪೊಲೀಸ್ ಇಲಾಖೆ ಬಿ. ಸಿ. ರೋಡಿನಲ್ಲಿ ಅಳವಡಿಸಿದ್ದ ಸೀಸಿ ಕ್ಯಾಮೆರಾ ಕಾರ್ಯನಿರ್ವಹಿಸದೆ  ಕೆಟ್ಟು ಹೋಗಿದೆ. ಬಿ. ಸಿ. ರೋಡು ಸರ್ವಿಸ್ ರಸ್ತೆಯಿಂದ ಪೊಲೀಸ್ ಠಾಣೆಯ ರಸ್ತೆಗೆ ತಿರುವು ಪಡೆಯುವ ಸ್ಥಳ ಹಾಗೂ ವಿವಿಧ ದಿಕ್ಕುಗಳ ಮೇಲೆ ನಿಗಾ ಇಡಲು ಮೂರ್ನಾಲ್ಕು ಸೀಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.                   ಆದರೆ  ಅದು ಸಮಪರ್ಕವಾಗಿ ಕಾರ್ಯನಿರ್ವಹಿಸದೆ ಕಂಬಗಳ ಹಾಗೂ ತಂತಿಗಳ ಮಧ್ಯೆ ಸಿಲುಕಿದೆ. ಇದೀಗ ಮೋಟಾರು ವಾಹನ ಕಾಯ್ದೆ ಕಠಿಣವಾಗಿ ಜಾರಿಯಾಗಿರುವ ಹಿನ್ನಲೆಯಲ್ಲಿ  ಬಿ. ಸಿ. ರೋಡು ಸಹಿತ ಕೆಲವೆಡೆ ಸೀಸಿ ಕ್ಯಾಮೆರಾ ಅಳವಡಿಸಲಾಗಿದೆ. ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವವರ ವಿರುದ್ದ ಕ್ರಮ ಕೈಗೊಳ್ಳುವುದು ಸಹಿತ ವಿವಿಧ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲೂ  ಅಲ್ಲಲ್ಲಿ ಸೀಸಿಕ್ಯಾಮರ ಅಳವಡಿಸಲಾಗಿದೆ. ಬಿ ಸಿ ರೋಡು ಮುಖ್ಯ ವೃತ್ತ,  ಬಸ್ ನಿಲ್ದಾಣ ಬಳಿ, ಕೈಕಂಬ ಮೊದಲಾದಡೆ ಸೀಸಿ ಕ್ಯಾಮೆರಾ ಸಹಿತ ವಿದ್ಯುದ್ದೀಪವನ್ನು ಹಾಕಲಾಗಿದೆ.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...