Friday, January 30, 2026

ಬಿ.ಸಿ.ರೋಡಿನಲ್ಲಿ ಸೀಸಿ ಕ್ಯಾಮರ ಕಣ್ಗಾವಲು !

ಬಂಟ್ವಾಳ : ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಬಿ.ಸಿ.ರೋಡಿನಲ್ಲಿ ಕೊನೆಗೂ ಸೀಸಿ ಕ್ಯಾಮೆರಾ ಕಣ್ಗಾವಲು ಇರಿಸಲಾಗಿದೆ. ಇನ್ನು ಮುಂದೆ ವಾಹನ ಸವಾರರು ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದರೆ, ತಮ್ಮ ವಾಹನ ನಂಬರ್ ನ ಆಧಾರದಲ್ಲಿ ಮನೆಗೆ ನೊಟೀಸ್ ತಲುಪಲಿದ್ದು, ಅಪಾರ ಪ್ರಮಾಣದ ದಂಡವನ್ನು ತೆರಬೇಕಾದೀತು. ಈ ಹಿಂದೆ  ಗಲಭೆ ಸಂದರ್ಭ ಮಾತ್ರ ತಾಲೂಕಿನ ಹೃದಯಭಾಗವಾದ ಬಿ. ಸಿ. ರೋಡು ಸಹಿತ ಕೆಲವೊಂದು ಆಯಕಟ್ಟಿನ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಸೀಸಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ಇರಿಸಲಾಗಿತ್ತು. ಸೀಸಿ ಕ್ಯಾಮರಾದಿಂದ ವಿವಿಧ ಅಪರಾಧ ಚಟುವಟಿಕೆಯನ್ನು ಪತ್ತೆಹಚ್ಚುವುದು ಸೇರಿದಂತೆ ಹಲವಾರು ಸಂದರ್ಭದಲ್ಲಿ ಪೊಲೀಸರ ತನಿಖೆಗೂ ಸಹಕಾರವಾಗುತಿತ್ತು. ಆದರೆ  ಕಳೆದ ಬಾರಿ  ಪೊಲೀಸ್ ಇಲಾಖೆ ಬಿ. ಸಿ. ರೋಡಿನಲ್ಲಿ ಅಳವಡಿಸಿದ್ದ ಸೀಸಿ ಕ್ಯಾಮೆರಾ ಕಾರ್ಯನಿರ್ವಹಿಸದೆ  ಕೆಟ್ಟು ಹೋಗಿದೆ. ಬಿ. ಸಿ. ರೋಡು ಸರ್ವಿಸ್ ರಸ್ತೆಯಿಂದ ಪೊಲೀಸ್ ಠಾಣೆಯ ರಸ್ತೆಗೆ ತಿರುವು ಪಡೆಯುವ ಸ್ಥಳ ಹಾಗೂ ವಿವಿಧ ದಿಕ್ಕುಗಳ ಮೇಲೆ ನಿಗಾ ಇಡಲು ಮೂರ್ನಾಲ್ಕು ಸೀಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.                   ಆದರೆ  ಅದು ಸಮಪರ್ಕವಾಗಿ ಕಾರ್ಯನಿರ್ವಹಿಸದೆ ಕಂಬಗಳ ಹಾಗೂ ತಂತಿಗಳ ಮಧ್ಯೆ ಸಿಲುಕಿದೆ. ಇದೀಗ ಮೋಟಾರು ವಾಹನ ಕಾಯ್ದೆ ಕಠಿಣವಾಗಿ ಜಾರಿಯಾಗಿರುವ ಹಿನ್ನಲೆಯಲ್ಲಿ  ಬಿ. ಸಿ. ರೋಡು ಸಹಿತ ಕೆಲವೆಡೆ ಸೀಸಿ ಕ್ಯಾಮೆರಾ ಅಳವಡಿಸಲಾಗಿದೆ. ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವವರ ವಿರುದ್ದ ಕ್ರಮ ಕೈಗೊಳ್ಳುವುದು ಸಹಿತ ವಿವಿಧ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲೂ  ಅಲ್ಲಲ್ಲಿ ಸೀಸಿಕ್ಯಾಮರ ಅಳವಡಿಸಲಾಗಿದೆ. ಬಿ ಸಿ ರೋಡು ಮುಖ್ಯ ವೃತ್ತ,  ಬಸ್ ನಿಲ್ದಾಣ ಬಳಿ, ಕೈಕಂಬ ಮೊದಲಾದಡೆ ಸೀಸಿ ಕ್ಯಾಮೆರಾ ಸಹಿತ ವಿದ್ಯುದ್ದೀಪವನ್ನು ಹಾಕಲಾಗಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...