Sunday, June 29, 2025

ಜ.2: ಚಂದಳಿಕೆ ಶಾಲೆಯಲ್ಲಿ ವಜ್ರಮಹೋತ್ಸವದ ಸಂಭ್ರಮ

ಚಂದಳಿಕೆ ಸರಕಾರಿ ಹಿ.ಪ್ರಾ ಶಾಲೆಯು 1958ರಲ್ಲಿ ಪ್ರಾರಂಭಗೊಂಡು 60 ರ ಸಂಭ್ರಮದಲ್ಲಿದ್ದು, ಜ. 2ರಂದು ವಜ್ರಮಹೋತ್ಸವ ಸಮಾರಂಭ ನಡೆಯಲಿದೆ. 60ರ ಸಂಭ್ರಮದ ಕಾರ್‍ಯಕ್ರಮವನ್ನು ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಮಾಡಲಿದ್ದಾರೆ. ರೂ.ಒಂದು ಲಕ್ಷ ಮೌಲ್ಯದಲ್ಲಿ ಸಭಾಂಗಣಕ್ಕೆ ಟೈಲ್ಸ್ ಅಳವಡಿಸಲಾಗಿದೆ ಜೆಎಸ್‌ಡಬ್ಲು ಸಿಮೆಂಟ್ ಲಿಮಿಟೆಡ್‌ನವರು ಕೊಡುಗೆಯಾಗಿ ನೀಡಿದ ನೂತನ ತರಗತಿ ಕೊಠಡಿ ಉದ್ಘಾಟನೆಯಾಗಲಿದೆ. ನ್ಯೂ ಇಂಡಿಯಾ ಇನ್ಸೂರೆನ್ಸ್‌ನವರು ರೂ.ಒಂದು ಲಕ್ಷ ಕೊಡುಗೆಯಿಂದ ನವೀಕರಿಸಿದ ನಲಿಕಲಿ ಕೊಠಡಿ ಉದ್ಘಾಟನೆಯಾಗಲಿದೆ. ಶಾಸಕರ ನಿಧಿಯಿಂದ ಇಂಟರ್‌ಲಾಕ್ ಅಳವಡಿಸಲಾಗಿದೆ ಅದಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ, ಎಲ್ಲಾ ತರಗತಿಗೆ ಟೈಲ್ಸ್ ಅಳವಡಿಕೆ, ಮುಖ್ಯದ್ವಾರಕ್ಕೆ ಹೊಸಗೇಟ್ ಹಾಗೂ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣಗಳ ಕಾಮಗಾರಿ ನಡೆದಿದೆ. ಈ ಕಾರ್‍ಯಕ್ರಮದ ಸಂಭ್ರಮದಲ್ಲಿ ತಾವೆಲ್ಲರು ಭಾಗವಹಿಸ ಬೇಕೆಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಭವಾನಿ ರೈ ಕೊಲ್ಯ ಹಾಗೂ ಮುಖ್ಯ ಶಿಕ್ಷಕ ಬಿ.ವಿಶ್ವನಾಥ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...