Saturday, February 8, 2025

ಜ.2: ಚಂದಳಿಕೆ ಶಾಲೆಯಲ್ಲಿ ವಜ್ರಮಹೋತ್ಸವದ ಸಂಭ್ರಮ

ಚಂದಳಿಕೆ ಸರಕಾರಿ ಹಿ.ಪ್ರಾ ಶಾಲೆಯು 1958ರಲ್ಲಿ ಪ್ರಾರಂಭಗೊಂಡು 60 ರ ಸಂಭ್ರಮದಲ್ಲಿದ್ದು, ಜ. 2ರಂದು ವಜ್ರಮಹೋತ್ಸವ ಸಮಾರಂಭ ನಡೆಯಲಿದೆ. 60ರ ಸಂಭ್ರಮದ ಕಾರ್‍ಯಕ್ರಮವನ್ನು ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಮಾಡಲಿದ್ದಾರೆ. ರೂ.ಒಂದು ಲಕ್ಷ ಮೌಲ್ಯದಲ್ಲಿ ಸಭಾಂಗಣಕ್ಕೆ ಟೈಲ್ಸ್ ಅಳವಡಿಸಲಾಗಿದೆ ಜೆಎಸ್‌ಡಬ್ಲು ಸಿಮೆಂಟ್ ಲಿಮಿಟೆಡ್‌ನವರು ಕೊಡುಗೆಯಾಗಿ ನೀಡಿದ ನೂತನ ತರಗತಿ ಕೊಠಡಿ ಉದ್ಘಾಟನೆಯಾಗಲಿದೆ. ನ್ಯೂ ಇಂಡಿಯಾ ಇನ್ಸೂರೆನ್ಸ್‌ನವರು ರೂ.ಒಂದು ಲಕ್ಷ ಕೊಡುಗೆಯಿಂದ ನವೀಕರಿಸಿದ ನಲಿಕಲಿ ಕೊಠಡಿ ಉದ್ಘಾಟನೆಯಾಗಲಿದೆ. ಶಾಸಕರ ನಿಧಿಯಿಂದ ಇಂಟರ್‌ಲಾಕ್ ಅಳವಡಿಸಲಾಗಿದೆ ಅದಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ, ಎಲ್ಲಾ ತರಗತಿಗೆ ಟೈಲ್ಸ್ ಅಳವಡಿಕೆ, ಮುಖ್ಯದ್ವಾರಕ್ಕೆ ಹೊಸಗೇಟ್ ಹಾಗೂ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣಗಳ ಕಾಮಗಾರಿ ನಡೆದಿದೆ. ಈ ಕಾರ್‍ಯಕ್ರಮದ ಸಂಭ್ರಮದಲ್ಲಿ ತಾವೆಲ್ಲರು ಭಾಗವಹಿಸ ಬೇಕೆಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಭವಾನಿ ರೈ ಕೊಲ್ಯ ಹಾಗೂ ಮುಖ್ಯ ಶಿಕ್ಷಕ ಬಿ.ವಿಶ್ವನಾಥ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...