Monday, January 26, 2026

ಫೆ.22 ರಿಂದ ಫೆ.28 ವರೆಗೆ ಚಟ್ಟೆಕಲ್ ಜುಮಾ ಮಸೀದಿ ವಠಾರದಲ್ಲಿ 7 ನೇ ಬ್ರಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ

ಬಂಟ್ವಾಳ: ಜಲಾಲಿಯ್ಯ ಜುಮಾ ಮಸ್ಜಿದ್ ಚಟ್ಟೆಕಲ್ ಸಜಿಪ ಇವರ ಆಶ್ರಯದಲ್ಲಿ ಯನಪೋಯ ಆಸ್ಪತ್ರೆ, ದಂತ ಕಾಲೇಜು ಮತ್ತು ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಕ್ಯಾನ್ಸರ್ ಬಗ್ಗೆ ಮಾಹಿತಿ ಶಿಬಿರ ಹಾಗೂ 7 ನೇ ಬ್ರಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ ಫೆ.22 ರಿಂದ ಫೆ.28 ವರೆಗೆ ಚಟ್ಟೆಕಲ್ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಫೆ.22ರಂದು ಸ್ವಲಾತ್ ವಾರ್ಷಿಕ ನಡೆಯಲಿದ್ದು, ಅಸ್ಸೈಯದ್ ಕೂರತ್ ತಂಙಳ್ ನೇತೃತ್ವ ನೀಡಲಿದ್ದಾರೆ. ಫೆ.23ರಂದು ಕುತುಬಿಯ್ಯತ್ ಜಿಸ್ತಿಯಾ ಕಾರ್ಯಕ್ರಮ ಜರುಗಲಿದ್ದು, ಸೈಯದ್ ಯು.ಪಿ.ಎಸ್.ಕಾಸಿಂ ತಂಙಳ್ ಹಾಗೂ ಮುಹಮ್ಮದ್ ಆಲಿ ಮದನಿ ಕೀಯಿಕ್ಕೋಡ್ ಪಾಲ್ಗೊಂಳ್ಳಲಿದ್ದಾರೆ. ಫೆ.24ರಂದು ಬೆಳಿಗ್ಗೆ ಮೆಡಿಕಲ್ ಕ್ಯಾಂಪ್ ಹಾಗೂ ಫೆ.25ರಂದು ಸೈಯದ್ ಆದೂರು ತಂಙಳ್ ದುಆ ನೇತೃತ್ವದೊಂದಿಗೆ ಅಬ್ದುಲ್ಲತೀಫ್ ಸಖಾಫಿ ಕಾಂತಪುರಂ ಪ್ರವಚನ ನೀಡಲಿದ್ದಾರೆ.
ಫೆ.26ರಂದು ಸೈಯದ್ ತ್ವಾಹ ತಂಙಳ್ ನೇತೃತ್ವದಲ್ಲಿ ಬುರ್ದಾ ಮಜ್ಲಿಸ್ ಜರುಗಲಿದೆ. ಫೆ.27ರಂದು ಉಮರ್‍ ಮುಸ್ಲಿಯಾರ್‍ ಮರ್ಧಾಳ ಪ್ರವಚನ ನೀಡಲಿದ್ದು, ಸೈಯದ್ ಶಹೀರ್‍ ತಂಙಳ್ ಮಳ್ಹರ್‍ ದುಆಗೆ ನೇತೃತ್ವ ನೀಡಲಿದ್ದಾರೆ. ಸಮಾರೋಪ ದಿನವಾದ ಫೆ. 28ರಂದು ಸೈಯದ್ ಚಟ್ಟೆಕ್ಕಲ್ ತಂಙಳ್ ನೇತೃತ್ವದಲ್ಲಿ ಜಲಾಲಿಯ್ಯ ಮಜ್ಲಿಸ್ ನಡೆಯಲಿದೆ. ಬಳಿಕ ಪೇರೋಡ್ ಮಹಮ್ಮದ್ ಅಝ್ಹರಿ ಪ್ರವಚನ ನೀಡಲಿದ್ದು, ಸೈಯದ್ ಸುಹೈಲ್ ತಂಙಳ್ ಕಣ್ಣೂರು ದುಆಗೆ ನೇತೃತ್ವ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...